ಕುಮಟಾ: ಶಿಕ್ಷಕರ ಪ್ರತಿನಿಧಿಯಾಗಿ ಅವರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ ಆತ್ಮ ತೃಪ್ತಿ ನನಗಿದೆ ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಹೇಳಿದರು.
ಅವರು ಪಟ್ಟಣದ ಕೊಂಕಣ ಎಜುಕೇಶನ್ ಟ್ರಸ್ಟ್’ನಲ್ಲಿ ಹಮ್ಮಿಕೊಂಡ ಪ್ರಚಾರ ಸಭೆಯಲ್ಲಿ ಮತಯಾಚಿಸಿದರು.
ಶಾಸಕ ದಿನಕರ ಶೆಟ್ಟಿ ಮಾತನಾಡಿ, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಶಿಕ್ಷಕರ ನೋವನ್ನು ಬಹಳ ಹತ್ತಿರದಿಂದ ಕಂಡವರು. ಪಶ್ಚಿಮ ಪದವೀಧರ ಕ್ಷೇತ್ರದಿಂದ 7 ಬಾರಿ ಗೆಲುವು ಸಾಧಿಸಿ, ದೇಶದಲ್ಲಿ ಇತಿಹಾಸದ ದಾಖಲೆ ನಿರ್ಮಿಸಿದ್ದಾರೆ. ಕುಮಟಾ ಕ್ಷೇತ್ರದ ಪ್ರತಿ ಶಿಕ್ಷಕರು ಬಸವರಾಜ ಹೊರಟ್ಟಿ ಅವರಿಗೆ ಮತ ನೀಡಿ, ಗೆಲ್ಲಿಸುವ ಹೊಣೆ ಇದೆ. 8 ನೆಯ ಬಾರಿಯೂ ಗೆಲುವಿಗೆ ಕಾರಣರಾಗಬೇಕು ಎಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ವಿಭಾಗದ ಸಹ ಪ್ರಭಾರಿ ಎನ್.ಎಸ್.ಹೆಗಡೆ, ಮಂಡಲಾಧ್ಯಕ್ಷ ಹೇಮಂತಕುಮಾರ ಗಾಂವಕರ, ಜಿಲ್ಲಾ ಯುವ ಮೋರ್ಚಾ ಪ್ರಭಾರಿ ಪ್ರೊ.ಎಂ.ಜಿ.ಭಟ್ಟ, ಪ್ರಮುಖರಾದ ಅಶೋಕ ಬಾಳೇರಿ ಸೇರಿದಂತೆ ಮತ್ತಿತರರು ಉಪಸ್ಥಿತರದ್ದರು. ಶಿಕ್ಷಕ ಚಿದಾನಂದ ಭಂಡಾರಿ ನಿರೂಪಿಸಿ, ವಂದಿಸಿದರು.
ವರದಿ: ನಟರಾಜ ಗದ್ದೆಮನೆ
More Stories
ನಿಶ್ಚಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ
ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿಯವರು ಮರಳಿ ಕಾಂಗ್ರೆಸ್ಗೆ ಸೇರ್ಪಡೆ.
ಅನಾರೋಗ್ಯವಿದ್ದರೂ ಪ್ರಚಾರ ಬಿಡದ ಡಾ.ಅಂಜಲಿ!