ಕುಮಟಾ :ವಿಶ್ವ ಬೈಸಿಕಲ್ ದಿನಾಚರಣೆ ಹಾಗೂ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಆರೋಗ್ಯ ಇಲಾಖೆ ,ರೋಟರಿ ಕ್ಲಬ್,ಭಾರತಿ ಸಂಸ್ಥೆ ಕುಮಟಾ, ಸೃಷ್ಟಿ ಬೆಟ್ಕುಳಿ, ಹಾಗೂ ಡಾ, ಏ ವಿ ಬಾಳಿಗಾ ವಾಣಿಜ್ಯ ವಿದ್ಯಾಲಯದ ಎನ್ ಎಸ್ ಎಸ್ ಘಟಕ ಕುಮಟಾದ ಸಹಯೋಗದಲ್ಲಿ ಗಿಡ ನೆಡುವ ಕಾರ್ಯಕ್ರಮ ಮತ್ತು ಸೈಕಲ್ ಜಾಥಾ ನಡೆಯಿತು
ಜಾಥವು ಬಾಳಿಗಾ ಕಾಲೇಜಿನಿಂದ ಮಾಸ್ತಿಕಟ್ಟೆ ಮಾರ್ಗವಾಗಿ ಮುರುಕಟ್ಟೆ ತಾಲೂಕಾ ಆರೋಗ್ಯ ಅಧಿಕಾರಿಗಳ ಕಚೇರಿ ವರೆಗೆ ನಡೆದು ಪರಿಸರ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಯಿತು. ಜಾಥಗೆ ಮಾನ್ಯ ತಹಶೀಲ್ದಾರ ವಿವೇಕ್ ಶೆಣ್ವಿ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ತಾಲೂಕಾ ಆರೋಗ್ಯ ಅಧಿಕಾರಿಗಳು, ಜಿಲ್ಲಾ ಮಟ್ಟದ ಆರೋಗ್ಯ ಅಧಿಕಾರಿಗಳು, ರೋಟರಿ ಅಧ್ಯಕ್ಷರು,ಭಾರತಿ ಸಂಸ್ಥೆ ಮತ್ತು ಸೃಷ್ಟಿ ಸಂಸ್ಥೆಯ ಅಧ್ಯಕ್ಷರು, ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.
ವರದಿ: ನಟರಾಜ ಗದ್ದೆಮನೆ
More Stories
ನಿಶ್ಚಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ
ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿಯವರು ಮರಳಿ ಕಾಂಗ್ರೆಸ್ಗೆ ಸೇರ್ಪಡೆ.
ಅನಾರೋಗ್ಯವಿದ್ದರೂ ಪ್ರಚಾರ ಬಿಡದ ಡಾ.ಅಂಜಲಿ!