ಕುಮಟಾ : ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದಕ್ಕೆ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ .
ತಾಲೂಕಿನ ಹೊಲನಗದ್ದೆ ಕಡ್ಲೆ ನಿವಾಸಿ ಪ್ರಣಮ್ ಈಶ್ವರ ನಾಯ್ಕ ( 18 ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ . ಡಾ ಎ ವಿ ಬಾಳಿಗಾ ಕಾಲೇಜ್ ವಿದ್ಯಾರ್ಥಿಯಾಗಿದ್ದು , ಇಂದು ಪ್ರಕಟವಾದ ಪಿಯುಸಿ ಫಲಿತಾಂಶದಲ್ಲಿ ಪ್ರಣವ್ ಫೇಲ್ ಆಗಿದ್ದಾನೆ .ಈ ವಿಷಯ ಕ್ಕೆ ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಈತನ ತಂದೆ ಆಟೋ ಚಾಲಕನಾಗಿದ್ದು , ಒಬ್ಬನೇ ಮಗನಾದ ಈತನನ್ನು ಬಹಳ ಪ್ರೀತಿಯಿಂದ ಬೆಳೆಸಿದ್ದರು . ಈತ ಕೂಡ ಚೆನ್ನಾಗಿ ಓದಿ ಒಳ್ಳೆಯ ನೌಕರಿ ಹಿಡಿಯುವ ಕನಸು ಕಂಡಿದ್ದ . ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗುತ್ತಿದ್ದಂತೆ ಮನನೊಂದ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ . ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ವರದಿ: ನಟರಾಜ ಗದ್ದೆಮನೆ
More Stories
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಜೆಡಿಎಸ್ ತೊರೆದು ‘ಕೈ’ ಹಿಡಿದ ಶಾಬಂದ್ರಿ
ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಡಿಕೆಶಿ ಘೋಷಣೆ