ಕುಮಟಾ: ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿಯಲ್ಲಿ ವರ್ಷಪ್ರತಿಯಂತೆ 10 ನೇ ವರ್ಗದ ವಿದ್ಯಾರ್ಥಿಗಳಿಂದ ಸರಸ್ವತಿ ಪೂಜೆ ನಡೆಸಲಾಯಿತು. ಹಿರೇಗುತ್ತಿ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಶಿವಾನಂದ ಭಟ್ ಪೂಜಾ ಕಾರ್ಯ ನೆರವೇರಿಸಿಕೊಟ್ಟರು. ನಂತರ ಪ್ರಸಾದ ವಿತರಿಸಲಾಯಿತು. ಸಿಹಿ ಹಂಚಲಾಯಿತು.
ಸರಸ್ವತಿ ಪೂಜೆಯನ್ನು 10 ನೇ ವರ್ಗದ ಶಿಕ್ಷಕರಾದ ನಾಗರಾಜ ಜಿ ನಾಯಕ ಮತ್ತು ಜಾನಕಿ ಎಂ ಗೊಂಡ ಮಾರ್ಗದರ್ಶನದಲ್ಲಿ ನಡೆಯಿತು. ವಿದ್ಯಾರ್ಥಿ ಪ್ರತಿನಿಧಿ ಎಂ.ಜಿ ನಾಗಭೂಷಣ, ಕಾಂಚಿಕಾ ನಾಯಕ, ಧೀರಜ ಪಟಗಾರ, ಅಕ್ಷತಾ ನಾಯಕ ಹಾಗೂ 10 ನೇ ವರ್ಗದ ವಿದ್ಯಾರ್ಥಿಗಳು ನಡೆಸಿಕೊಟ್ಟರು.
ಪೂಜಾ ಕಾರ್ಯದಲ್ಲಿ ಮುಖ್ಯಾಧ್ಯಾಪಕರಾದ ರೋಹಿದಾಸ ಎಸ್ ಗಾಂವಕರ, ಶಿಕ್ಷಕರಾದ ವಿಶ್ವನಾಥ ಬೇವಿನಕಟ್ಟಿ, ಬಾಲಚಂದ್ರ ಹೆಗಡೆಕರ್, ಎನ್ ರಾಮು ಹಿರೇಗುತ್ತಿ, ಮಹಾದೇವ ಗೌಡ, ಇಂದಿರಾ ನಾಯಕ, ಶಿಲ್ಪಾ ನಾಯಕ, ಮದನ ನಾಯಕ, ಕವಿತಾ ಅಂಬಿಗ, ಬಿ.ಇಡಿ ಪ್ರಶಿಕ್ಷಣಾರ್ಥಿಗಳಾದ ವಿದ್ಯಾಧರ ನಾಯಕ, ಮಹಿಮಾ ಗೌಡ, ಪಾರ್ವತಿ ಹಳ್ಳೇರ, ಗೋಪಾಲಕೃಷ್ಣ ಗುನಗಾ, ಗೋವಿಂದ ನಾಯ್ಕ ಉಪಸ್ಥಿತರಿದ್ದರು.
More Stories
ನಿಶ್ಚಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ
ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿಯವರು ಮರಳಿ ಕಾಂಗ್ರೆಸ್ಗೆ ಸೇರ್ಪಡೆ.
ಅನಾರೋಗ್ಯವಿದ್ದರೂ ಪ್ರಚಾರ ಬಿಡದ ಡಾ.ಅಂಜಲಿ!