April 30, 2024

Bhavana Tv

Its Your Channel

ಹಿರೇಗುತ್ತಿ ಹೈಸ್ಕೂಲಿನಲ್ಲಿ ಕನ್ನಡ ರಾಜ್ಯೋತ್ಸವ
ಕಾರ್ಯಕ್ರಮ

ಕುಮಟಾ : “ನಮ್ಮ ಕನ್ನಡ ಭಾಷೆಯಲ್ಲಿಯೇ ತಿಳಿಯಲಾರದಷ್ಟು ವಿಷಯಗಳಿವೆ, ಸಾಹಿತ್ಯಗಳಿವೆ ಯಾವ ಭಾಷೆ ಇರಲಿ ಆ ಭಾಷೆಗಳ ಒಟ್ಟಿಗೆ ಅಲ್ಲಿಯ ಸಂಪ್ರದಾಯ, ಸಂಸ್ಕೃತಿಗಳು ಹಾಸು ಹೊಕ್ಕಾಗಿವೆ, ಆದ್ದರಿಂದ ನಮ್ಮ ಕನ್ನಡ ಮಾತೃ ಭಾಷೆಯಲ್ಲಿರುವ ಸಂಸ್ಕೃತಿ ಆಚಾರ-ವಿಚಾರ ನಡೆ-ನುಡಿಗಳನ್ನು ವಿದ್ಯಾರ್ಥಿ ಜೀವನದಿಂದಲೇ ಅಳವಡಿಸಿಕೊಳ್ಳಬೇಕೆಂದು” ಮಹಾತ್ಮಾಗಾಂಧಿ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ಎನ್ ನಾಯಕ ಹೇಳಿದರು. ಅವರು ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೋಹನ ಗಾಂವಕರ ಹಿರೇಗುತ್ತಿ ನಿವೃತ್ತ ಶಿಕ್ಷಕರು ಮಾತನಾಡಿ “ವಿದ್ಯಾರ್ಥಿ ಜೀವನದಿಂದಲೇ ಶಿಸ್ತು, ಸ್ವಚ್ಚತೆ, ಸಮಯ ಪರಿಪಾಲನಾ ಗುಣಗಳನ್ನು ಅಳವಡಿಸಿಕೊಳ್ಳಬೇಕು. ನಮ್ಮ ಮಾತೃಭಾಷೆಯ ಜೊತೆಗೆ ಇತರ ಭಾಷೆಯನ್ನು ಪ್ರೀತಿಸೋಣ” ಎಂದರು.
ಮುಖ್ಯಾಧ್ಯಾಪಕÀÀ ರೋಹಿದಾಸ ಗಾಂವಕರ “ಕನ್ನಡ ರಾಜ್ಯೋತ್ಸವದ ದಿನದ ಮಹತ್ವ ವಿದ್ಯಾರ್ಥಿಗಳಿಗೆ ತಿಳಿಸಿದರು. ಕನ್ನಡವನ್ನು ರಕ್ಷಿಸುವ ಕೆಲಸ ವಿದ್ಯಾರ್ಥಿಗಳಿಂದಾಗಬೇಕು” ಎಂದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಎನ್.ರಾಮು.ಹಿರೇಗುತ್ತಿ, “ಈ ನೆಲದ ದೇಶಿ ಭಾಷೆಯ ಸೊಗಡು ಮತ್ತು ಸಂಸ್ಕೃತಿಯ ಸೌರಭ ಸಂಕೇತಿಸುವAತೆ ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನವೆಂಬರ 01,1973 ರಂದು ಮರುನಾಮಕರಣ ಮಾಡಲಾಯಿತು” ಎಂದರು. ವಿದ್ಯಾರ್ಥಿಗಳಿಗೆ ಗಾಳಿಪಟ ಮತ್ತು ರಂಗೋಲಿ ಸ್ಪರ್ಧೆ, ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮಹಾತ್ಮಾಗಾಂಧಿ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾದ ಶ್ರೀಕಾಂತ ನಾಯಕ, ಶಿಕ್ಷಕರಾದ ವಿಶ್ವನಾಥ ಬೇವಿನಕಟ್ಟಿ, ಬಾಲಚಂದ್ರ ಹೆಗಡೇಕರ, ನಾಗರಾಜ ನಾಯಕ, ಬಾಲಚಂದ್ರ ಅಡಿಗೋಣ, ಜಾನಕಿ ಗೊಂಡ, ಇಂದಿರಾ ನಾಯಕ, ಶಿಲ್ಪಾ ವಿ ನಾಯಕ, ಮದನ ನಾಯಕ, ಕವಿತಾ ಅಂಬಿಗ, ಗೋಪಾಲಕೃಷ್ಣ ಗುನಗಾ, ಗೋವಿಂದ ನಾಯ್ಕ, ವಿದ್ಯಾಧರ ನಾಯಕ ಉಪಸ್ಥಿತರಿದ್ದರು. ಎನ್ ರಾಮು ಹಿರೇಗುತ್ತಿ ಸ್ವಾಗತಿಸಿ ನಿರೂಪಣೆ ಮಾಡಿದರು. ಮಹಾದೇವ ಗೌಡ ವಂದಿಸಿದರು.

error: