ಕುಮಟಾ: ಪರೇಶ ಮೇಸ್ತಾನ ಸಾವಿನಲ್ಲಿ ಬಿಜೆಪಿಗರು ರಾಜಕೀಯ ಲಾಭಪಡೆದ ಅಧಿಕಾರಕ್ಕೆ ಬಂದು ಬಿಜೆಪಿಯವರು ದುರಾಡಳಿತವನ್ನು ಮಾಡುತ್ತಿದ್ದಾರೆ ಈ ಮೋಸವನ್ನು ಸಾರ್ವಜನಿಕರ ಎದುರು ತೆರೆದಿಡುವ ದೃಷ್ಠಿಯಿಂದ ಇದೆ ಬರುವ ನವೆಂಬರ್ 24 ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಪಿ.ಸಿ.ಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ಹೇಳಿದರು.
ಅವರು ಕುಮಟಾದ ಮಣಕಿ ಮೈದಾನದಲ್ಲಿ ನಡೆಯುತ್ತಿರುವ ಬೃಹತ್ ಜನಜಾಗೃತಿ ಸಮಾವೇಶದ ಸಿದ್ದತೆಯನ್ನು ಪರಿಶೀಲಿಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಪರೇಶ ಮೆಸ್ತಾನ ಸಾವಿನ ಲಾಭ ಪಡೆದ ಬಿಜೆಪಿ ಹಾಗೂ ಬಿಜೆಪಿಯ ದುರಾಡಳಿತದ ಬಗ್ಗೆ ಜನರು ರೋಸಿ ಹೋಗಿದ್ದಾರೆ. ಬೆಲೆ ಏರಿಕೆ ಬಿಸಿಗೆ ಬಡ ಮತ್ತು ಮದ್ಯಮ ವರ್ಗದ ಜನರು ತತ್ತರಿಸುವಂತಾಗಿದೆ. ಇದರ ಬಗ್ಗೆ ಜನರಿಗೆ ಮನವರಿಕೆ ಮಾಡಲಿದ್ದೇವೆ. ಈ ಜನಜಾಗೃತಿ ಸಮಾವೇಶಕ್ಕೆ ವಿಧಾನ ಪರೀಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಲ್ಹಿ ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ ಕೆ.ಪಿ,ಸಿ.ಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ ಹಾಗೂ ರಾಜ್ಯ ನಾಯಕರು ಹಾಗೂ ಮಾಜಿ ಮಂತ್ರಿಗಳು, ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ. ಸಮಾವೇಶಕ್ಕೆ ಆಗಮಿಸಲಿರುವ ಸಾರ್ವಜಕರಿಗೆ ವಾಹನದ ವ್ಯವಸ್ಥೆ, ಊಟದ ವ್ಯವಸ್ಥೆ, ಸೇರಿದಂತೆ ಸಕಲ ಸಿದ್ದತೆ ನಡೆಯುತ್ತಿದೆ. ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರದಿಂದ 10 ಸಾವಿರ ಕಾರ್ಯಕರ್ತರು ಆಗಮಿಸುವ ನೀರಿಕ್ಷೆ ಇದೆ. ಅಲ್ಲದೇ ದಕ್ಷೀಣ ಕನ್ನಡ ಜಿಲ್ಲೆಯಿಂದ ಕಾರ್ಯಕರ್ತರು ಮುಖಂಡರು ಈ ಸಮಾವೇಶಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದು ಹೇಳಿದರು.
ಈ ವೇಳೆ ಮಾಜಿ ಶಾಸಕಿ ಶಾರದಾ ಶೆಟ್ಟಿ, ಮುಖಂಡರಾದ ಮಂಜುನಾಥ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಎಲ್.ನಾಯ್ಕ, ಸೇವಾದಳ ಜಿಲ್ಲಾಧ್ಯಕ್ಷ ಆರ್.ಎಚ್.ನಾಯ್ಕ, ಭುವನ್ ಭಾಗ್ವತ, ಮಧುಸೂಧನ ಶೇಟ್ ಅನೀತಾ ಮಾಫಾರಿ ಇತರಿದ್ದರು.
ವರದಿ:ವಿಶ್ವನಾಥ ಜಿ ನಾಯ್ಕ ಕುಮಟಾ
More Stories
ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶೇ. 94.23
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಜೆಡಿಎಸ್ ತೊರೆದು ‘ಕೈ’ ಹಿಡಿದ ಶಾಬಂದ್ರಿ