ಕುಮಟಾ: ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವು ಅರ್ಥಪೂರ್ಣವಾಗಿ ನಡೆಯಿತು.
ಕಾರ್ಯಕ್ರಮದ ಘನ ಅಧ್ಯಕ್ಷತೆ ವಹಿಸಿದ ಮಹಾತ್ಮಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ಎನ್ ನಾಯಕರು “ವಿದ್ಯಾರ್ಥಿಗಳು ಶಿಸ್ತು ಮತ್ತು ಪ್ರೀತಿಯಿಂದ ವಿದ್ಯಾರ್ಜನೆ ಮಾಡಿದಾಗ ಯಶಸ್ಸು ಸುಲಭವಾಗುತ್ತದೆ. ಪರಿಶ್ರಮದ ಮೂಲಕ ವಿದ್ಯಾರ್ಥಿ ಜೀವನವನ್ನು ಗಟ್ಟಿಗೊಳಿಸಿಕೊಳ್ಳುತ್ತಾ ಸಮಯದ ಸದುಪಯೋಗ ಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ತಮ್ಮ ಆಶಯ ಹಾಗೂ ಆಸಕ್ತಿಗಳಿಗೆ ತಕ್ಕಂತೆ ವಿದ್ಯಾರ್ಜನೆ ಮುಂದುವರೆಸಿದ್ದಲ್ಲಿ ಯಶಸ್ಸು ಖಂಡಿತವಾಗಿ ಸಿಗುತ್ತದೆ” ಎಂದರು.
ಆಡಳಿತ ಮಂಡಳಿಯ ಸದಸ್ಯರಾದ ಎನ್ ಟಿ ನಾಯಕ ಮಾತನಾಡಿ “ಗುರಿಯ ಸಫಲತೆಯಲ್ಲಿ ಅವಿರತ ಪ್ರಯತ್ನ ಮುಖ್ಯ “ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಎದುರಿಸಿ ಉತ್ತಮ ಫಲಿತಾಂಶ ನೀಡುವುದರ ಮೂಲಕ ಪಾಲಕರಿಗೆ, ಶಾಲೆಗೆ, ಊರಿಗೆ ಕೀರ್ತಿ ತನ್ನಿ” ಎಂದರು.
ಮುಖ್ಯಾಧ್ಯಾಪಕ ರೋಹಿದಾಸ ಎಸ್ ಗಾಂವಕರ ಮಾತನಾಡಿ “ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರಹಃ ಹಾಗೆಯೇ ವಿದ್ಯಾರ್ಥಿಗಳು ಭವಿಷ್ಯತ್ತಿನ ಜೀವನದಲ್ಲಿ ಸಮಾಜಪಯೋಗಿ ವ್ಯಕ್ತಿಯಾಗಿ ಬದುಕಬೇಕು” ಎಂದು ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಶಿಕ್ಷಕರಾದÀ ವಿಶ್ವನಾಥ ಬೇವಿನಕಟ್ಟಿ ಮಾತನಾಡಿ “ಪರೀಕ್ಷಾ ನಿಯಮಾವಳಿಗಳ ಬಗ್ಗೆ ವಿದ್ಯರ್ಥಿಗಳಿಗೆ ತಿಳಿಸಿದರು.”
ವಿದ್ಯಾರ್ಥಿಗಳಾದ ಕೌಶಿಕ ನಾಯಕ, ಶಿವಪ್ರಸಾದ ನಾಯಕ, ಸುವರ್ಣ ಭಂಡಾರಕರ್, ಪ್ರೀತಿ ನಾಯಕ ಶಾಲೆಯಲ್ಲಿ ಕಲಿಕೆಯ ತಮ್ಮ ಸಿಹಿ ಅನುಭವವನ್ನು ಹಂಚಿಕೊAಡರು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ನಾಗಪ್ಪ ಕೆರೆಮನೆ, ಶಿಕ್ಷಕರಾದ ಬಾಲಚಂದ್ರ ಹೆಗಡೆಕರ್, ನಾಗರಾಜ ನಾಯಕ, ಬಾಲಚಂದ್ರ ನಾಯಕ, ಇಂದಿರಾ ನಾಯಕ, ಜಾನಕಿ ಎಮ್ ಗೊಂಡ, ಶಿಲ್ಪಾ ನಾಯಕ, ಮದನ ನಾಯಕ, ಕವಿತಾ ಅಂಬಿಗ, ಗೋಪಾಲಕೃಷ್ಣ ಗುನಗಾ, ಗೋವಿಂದ ನಾಯ್ಕ ಉಪಸ್ಥಿತರಿದ್ದರು.
ಕಾರ್ಯಕ್ರಮವು ಚೈತನ್ಯ ಸಂಗಡಿಗರ ಪ್ರಾರ್ಥನೆಯೊಂದಿಗೆ ಆರಂಭಗೊAಡಿತು. ಎನ್.ರಾಮು.ಹಿರೇಗುತ್ತಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮಹಾದೇವ ಗೌಡ ವಂದಿಸಿದರು.
ವರದಿ: ಎನ್ ರಾಮು ಹಿರೇಗುತ್ತಿ
More Stories
ನಿಶ್ಚಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ
ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿಯವರು ಮರಳಿ ಕಾಂಗ್ರೆಸ್ಗೆ ಸೇರ್ಪಡೆ.
ಅನಾರೋಗ್ಯವಿದ್ದರೂ ಪ್ರಚಾರ ಬಿಡದ ಡಾ.ಅಂಜಲಿ!