ಮುರುಡೇಶ್ವರದ ಆರ್.ಎನ್.ಎಸ್ ಸಮೂಹ ಶಿಕ್ಷಣಸಂಸ್ಥೆ ವತಿಯಿಂದ 73 ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆರ್.ಎನ್.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಆರ್.ಎನ್.ಎಸ್ ಪ್ರಥಮ ದರ್ಜೆ ಕಾಲೇಜು, ಬೆಂಗಳೂರಿನ ಪ್ರಾಚಾರ್ಯರಾದ ಡಾ|| ಸುಧೀರ ಪೈರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ; ಭಾರತ ದೇಶಕ್ಕೆ ಪವಿತ್ರವಾದ ಸಂವಿಧಾನವನ್ನು ರಚಿಸಿ ಅಂಗೀಕರಿಸಿ ಸ್ವೀಕರಿಸಿದ ಮಹತ್ವದ ದಿನ ಮತ್ತು ಭಾರತ ದೇಶವನ್ನು ಪ್ರಜಾಪ್ರಭುತ್ವ ರಾಷ್ಟç ಗಣರಾಜ್ಯ ದೇಶ ಎಂದು ಘೋಷಣೆ ಮಾಡಿದ ಐತಿಹಾಸಿಕ ದಿನವೆಂದು; ಭಾರತಕ್ಕೆ ಸ್ವತಂತ್ರವನ್ನು ತಂದುಕೊಡುವಲ್ಲಿ ಅದೆಷ್ಟೊ ವೀರ ನಾಯಕರು ಜೀವವನ್ನು ಬಲಿದಾನ ನೀಡಿದ್ದಾರೆ. ಅಂತವರನ್ನು ಸ್ಮರಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯವೆಂದು ಹೇಳುತ್ತ ನೆರೆದ ಎಲ್ಲ ಉಪನ್ಯಾಸಕರಿಗೆ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಆರ್.ಎನ್.ಎಸ್ ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಮಾಧವ ಪಿ. ಯವರು ಸ್ವಾಗತಿಸಿ ಆರ್.ಎನ್.ಎಸ್ ವಿದ್ಯಾನಿಕೇತನದ ಪ್ರಾಚಾರ್ಯರಾದ ಡಾ|| ಸುರೇಶ ಶೆಟ್ಟಿಯವರು ವಂದನಾರ್ಪಣೆಗೈದರು. ಕಾರ್ಯಕ್ರಮದಲ್ಲಿ ಮೂರು ಶಿಕ್ಷಣ ಸಂಸ್ಥೆಯ ಉಪನ್ಯಾಸಕರು, ಸಿಬ್ಬಂದಿಗಳು ಹಾಜರಿದ್ದರು.
More Stories
ಮುರ್ಡೇಶ್ವರದಲ್ಲಿ ಗ್ರಾಮೀಣ ಮಹಿಳಾ ದಿನಾಚರಣೆ- 2024
ಅತ್ಯಂತ ಯಶಸ್ವೀಯಾಗಿ ನಡೆದ ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ಸಿಪ್ ಕಾರ್ಯಕ್ರಮ:
ಬೀನಾ ವೈದ್ಯ ಪದವಿ ಪೂರ್ವ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ: