ಭಟ್ಕಳ :ಮುರ್ಡೇಶ್ವರ ಪ್ರವಾಸಕ್ಕೆ ಬಂದ ಮೂವರು ಯುವಕರು ಸಮುದ್ರ ಅಲೆಗೆ ಕೊಚ್ಚಿ ಹೋಗುತ್ತಿದ್ದ ವೇಳೆ ಅಲ್ಲಿನ ಲೈಫ್ ಗಾರ್ಡಗಳು ಬೋಟ್ ಮೂಲಕ ತೆರಳಿ ಮೂವರು ಯುವಕರನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ.
ಸಮುದ್ರದಲ್ಲಿ ಕೊಚ್ಚಿಹೋದ ಯುವಕರನ್ನು ಮಾರುತಿ, ಅನಿಲ್ ಕುಮಾರ ಹಾಗೂ ಪುರುಷೋತ್ತಮ ಎಂದು ತಿಳಿದು ಬಂದಿದೆ. ಸದ್ಯ ಮುರುಡೇಶ್ವರಕ್ಕೆ ಬರುವ ಪ್ರವಾಸಸಿಗ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಹೀಗೆ ಪ್ರವಾಸಕ್ಕೆಂದು ಬಂದ ಶಿವಮೊಗ್ಗ ಕಾಲೇಜಿನ 16 ಯುವಕರ ತಂಡ ಮುರುಡೇಶ್ವರ ಶಿವನ ದರ್ಶನ ಪಡೆದು ಮೋಜು ಮಸ್ತಿಗೆ ಸಮುದ್ರಕ್ಕಿಳಿದ್ದಾರೆ. ಈ ವೇಳೆ ಮೂವರು ಯುವಕರು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿ ಹೋಗುತ್ತಿರುದನ್ನು ಗಮನಿಸಿದ ಸ್ಥಳೀಯ ಲೈಫ್ ಗಾರ್ಡ್ ಗಳೂ ಬೋಟನಲ್ಲಿ ತೆರಳಿ ಮೂವರು ಯುವಕರನ್ನು ರಕ್ಷಣೆ ಮಾಡಿದ್ದಾರೆ
ಲೈಪ್ ಗಾರ್ಡಗಳ ಸಮಯ ಪ್ರಜ್ಞೆಯಿಂದ ಮೂವರು ಬದುಕಿದ್ದು ಲೈಪ್ ಗಾರ್ಡಗಳ ಸಾಹಸಕ್ಕೆ ಪ್ರವಾಸಿಗರ ಮೆಚ್ಚುಗೆ ವ್ಯಕ್ತವಾಗಿದೆ.
ಈ ರಕ್ಷಣಾ ಕಾರ್ಯಾಚರಣೆಯಲ್ಲಿ ಲೈಫ್ ಗಾರ್ಡ್ ಗಳಾದ ಹನುಮಂತ, ಸಂದೀಪ ಹರಿಕಾಂತ , ಕೇಶವ ಮೊಗೇರ ಹಾಗೂ ಬೀಚ್ ಮೇಲ್ವಿಚಾರಕ ದತ್ತಾತ್ರೇಯ ಶೆಟ್ಟಿ ಉಪಸ್ಥಿತರಿದ್ದರು
More Stories
ಬೀನಾ ವೈದ್ಯ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಒಲಿಂಪಿಯಾಡ ಪದಕ ವಿತರಣ ಸಮಾರಂಭ:
ಮುರ್ಡೇಶ್ವರದಲ್ಲಿ ಗ್ರಾಮೀಣ ಮಹಿಳಾ ದಿನಾಚರಣೆ- 2024
ಅತ್ಯಂತ ಯಶಸ್ವೀಯಾಗಿ ನಡೆದ ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ಸಿಪ್ ಕಾರ್ಯಕ್ರಮ: