ಭಟ್ಕಳ; ‘ಪರೀಕ್ಷೆ ಎಂದರೆ ಭಯ ಬೇಡ’; ಅದನ್ನು ಹಬ್ಬವನ್ನಾಗಿ ಆಚರಿಸಬೇಕು; ಹಬ್ಬವನ್ನು ಆಚರಿಸುವ ಮೊದಲು ಅದರ ಪೂರ್ವ ತಯಾರಿಯನ್ನು ಮಾಡಿಕೊಂಡ ಹಾಗೆ ಪರೀಕ್ಷೆಗಳಿಗೂ ಸರಿಯಾದ ಪೂರ್ವ ತಯಾರಿ ಮಾಡಿಕೊಂಡರೆ ಭಯಪಡುವ ಅಗತ್ಯವಿಲ್ಲ ಎಂದು ಆರ್.ಎನ್.ಎಸ್.ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳಾದ ಡಾ| ಸುಧೀರ್ ಪೈ ಕೆ.ಎಲ್. ಇವರು ತಿಳಿಸಿದರು.
ಎಲ್ಲಾ ವಿದ್ಯಾರ್ಥಿಗಳೂ ಓದಿ ಕಲಿಯುವುದಕ್ಕಿಂತ ಬರೆದು ಬರೆದು ಅಭ್ಯಾಸ ಮಾಡಬೇಕೆಂದು ಹೇಳಿದರು. ಅವರು ಆರ್.ಎನ್.ಎಸ್.ವಿದ್ಯಾನಿಕೇತನ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಾ ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಆರ್.ಎನ್.ಎಸ್. ಪ್ರಥಮ ದರ್ಜೆ ಕಾಲೇಜು, ಬೆಂಗಳೂರು. ಇದರ ಪ್ರಾಧ್ಯಾಪಕರಾದ ಪ್ರೊ.ಜಗದೀಶ್ ರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಆರ್.ಎನ್.ಎಸ್.ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀ.ಮಾಧವ ಪಿ.ಯವರು ವಿದ್ಯಾರ್ಥಿಗಳಿಗೆ ಹಿತನುಡಿದರು. ಆರ್.ಎನ್.ಎಸ್.ವಿದ್ಯಾನಿಕೇತನದ ಪ್ರಭಾರ ಪ್ರಾಚಾರ್ಯರಾದ ಶ್ರೀಮತಿ ಗೀತಾ ಕಿಣಿಯವರು ಆಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ಶೃತಿ ನಾಯ್ಕ ಸ್ವಾಗತಿಸಿ, ಶ್ರೀಮತಿ ಬಬಿತಾ ಮಾಧವ ವಂದಿಸಿದರು.
More Stories
ಮುರ್ಡೇಶ್ವರದಲ್ಲಿ ಗ್ರಾಮೀಣ ಮಹಿಳಾ ದಿನಾಚರಣೆ- 2024
ಅತ್ಯಂತ ಯಶಸ್ವೀಯಾಗಿ ನಡೆದ ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ಸಿಪ್ ಕಾರ್ಯಕ್ರಮ:
ಬೀನಾ ವೈದ್ಯ ಪದವಿ ಪೂರ್ವ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ: