May 3, 2024

Bhavana Tv

Its Your Channel

ಮುರ್ಡೇಶ್ವರ ಆರ್.ಎನ್.ಎಸ್ ವಿದ್ಯಾನಿಕೇತನ ವಿದ್ಯಾರ್ಥಿಗಳ ಸಾಧನೆ

ಮುರುಡೇಶ್ವರದ ಆರ್. ಎನ್. ಶೆಟ್ಟಿ ಟ್ರಸ್ಟಿನ ಆಡಳಿತಕ್ಕೊಳಪಟ್ಟ ಆರ್.ಎನ್.ಎಸ್. ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶವನ್ನು ಗಳಿಸಿ ಸಾಧನೆ ಮಾಡಿದ್ದಾರೆ.
ಪರೀಕ್ಷೆಗೆ ಹಾಜರಾದ 55 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿಗಳು 90% ಕ್ಕಿಂತಲೂ ಅಧಿಕ ಅಂಕ ಗಳಿಸಿದ್ದಾರೆ, 33 ವಿದ್ಯಾರ್ಥಿಗಳು ಉನ್ನತ ಶ್ರೇಣಿ (ಡಿಸ್ಟಿಂಗಶನ್), 16 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಕುಮಾರ. ಆಕಾಶ್ ಡಿ ಶೇಟ್ 622(99.52%) ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ 4ನೇ ಸ್ಥಾನ ಪಡೆದಿರುತ್ತಾನೆ, ಕುಮಾರಿ. ಯಶಸ್ವಿನಿ ಪಿ ನಾಯ್ಕ ಮತ್ತು ಎಸ್ ಸುದೀಶ್ 619(99.04%) ಶಾಲೆಗೆ ದ್ವಿತೀಯ ಹಾಗೂ ರಾಜ್ಯಕ್ಕೆ 7ನೇ ಸ್ಥಾನ ಪಡೆದಿರುತ್ತಾರೆ. ಎಸ್ ಯಶಸ್ವಿ 618 (98.88%) ಅಂಕಗಳಿಸಿ ಶಾಲೆಗೆ ತೃತೀಯ ಹಾಗೂ ರಾಜ್ಯಕ್ಕೆ 8ನೇ ಸ್ಥಾನ ಪಡೆದಿರುತ್ತಾರೆ. ಅಲ್ಲದೆ ಸಂಜಿತ್ ಹೆಗಡೆ ಹಾಗೂ ಸನ್ನಿಧಿ ಕಾಮತ್ 616 (98.56%) ಅಂಕ ಗಳಿಸಿ ಶಾಲೆಗೆ 4ನೇ ಸ್ಥಾನ ಹಾಗೂ ರಾಜ್ಯಕ್ಕೆ 10 ನೇ ಸ್ಥಾನ ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ, ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.

error: