May 12, 2024

Bhavana Tv

Its Your Channel

ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಮುರುಡೇಶ್ವರ ಗೇಟ್ ಬಳಿಯ ಬಸ್ ನಿಲ್ದಾಣ ಸ್ವಚ್ಚತಾ ಕಾರ್ಯಕ್ರಮ

ಮುರುಡೇಶ್ವರ :- ಗುರುವಾರ ಆರ್ ಎನ್ ಎಸ್ ಪ್ರಥಮ ದರ್ಜೆ ಕಾಲೇಜು ಮುರುಡೇಶ್ವರದ ರಾಷ್ಟಿçÃಯ ಸೇವಾ ಯೋಜನಾ ಘಟಕದ ವತಿಯಿಂದ ದೈನಂದಿನ ಕಾರ್ಯಕ್ರಮದ ಅಡಿಯಲ್ಲಿ ಮುರುಡೇಶ್ವರ ಗೇಟ್ ಬಳಿಯ ಬಸ್ ನಿಲ್ದಾಣ ಸ್ವಚ್ಚತಾ ಕಾರ್ಯಕ್ರಮ ನೆರವೇರಿಸಲಾಯಿತು
ಕಾರ್ಯಕ್ರಮವನ್ನು ದೀಪ ಬೇಳಗಿಸುವುದರ ಮೂಲಕ ಆರ್ ಎನ್ ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳಾದ ದಿನೇಶ ಗಾವಂಕರ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಿ.ಯು.ಕಾಲೇಜಿನ ಪ್ರಾಚಾರ್ಯರಾದ ಮಾಧವ ಪಿ. ಗೌರವ ಉಪಸ್ಥಿತರಿದ್ದು, ಮಾತನಾಡಿ ಈ ದೇಶಕ್ಕೆ ನಾವು ಕೊಡುವ ಕೊಡುಗೆಯೆಂದರೆ ಅದು ದೇಶ ಸೇವ ಮಾತ್ರ ಎಂದರು . ಆರ್.ಎನ್.ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ.ಸಂಜಯ ಕೆ.ಎಸ್ ಎನ್.ಎಸ್.ಎಸ್ ಯೋಜನಾಧಿಕಾರಿಗಳಾದ ಗಣೇಶ ನಾಯ್ಕ ಹಾಗೂ ಎಲ್ಲಾ ಉಪನ್ಯಾಸಕರು ಹಾಜರಿದ್ದರು. ಸಹಯೋಜನಾಧಿಕಾರಿಗಳಾದ ಗಣಪತಿ ಕಾಯ್ಕಿಣಿಯವರು ಕಾರ್ಯಕ್ರಮವನ್ನು ನಿರೂಪಿಸಿ ಎಲ್ಲರನ್ನು ಸ್ವಾಗತಿಸಿದರು. ನಂತರ ವಿದ್ಯಾರ್ಥಿಗಳು ಸ್ವಚ್ಚತಾ ಕಾರ್ಯಕ್ರಮವನ್ನು ನೆರೆವೇರಿಸಿದರು.

error: