April 16, 2024

Bhavana Tv

Its Your Channel

ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಮುರುಡೇಶ್ವರ:- ಆರ್.ಎನ್.ಎಸ್.ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ತಾಲೂಕಿನ ಖ್ಯಾತ ನಿರೂಪಕರು ಹಾಗೂ ಶ್ರೀವಲ್ಲಿ ಪ್ರೌಢಶಾಲೆಯ ಶಿಕ್ಷಕರಾಗಿರುವ ನಾರಾಯಣ ನಾಯ್ಕ ಮಾತನಾಡಿ ಶಿಕ್ಷಣವು ಸ್ಪರ್ಧಾತ್ಮಕವಾಗುತ್ತಿದೆ ಹೆಚ್ಚಿನ ಅಂಕಗಳನ್ನು ಗಳಿಸುವುದು ಅನಿವಾರ್ಯವಾಗಿದೆ ಇದನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳು ಅಭ್ಯಾಸ ಮಾಡಬೇಕು ಮತ್ತು ಮೊಬೈಲ್ ಗಳಿಂದ ಆದಷ್ಟು ದೂರ ಇರುವಂತೆ ಅದರ ದುಷ್ಪರಿಣಾಮದ ಕುರಿತು ಕೆಲವು ಜ್ವಲಂತ ಉದಾಹರಣೆ ಸಹಿತ ವಿದ್ಯಾರ್ಥಿಗಳಿಗೆ ತಿಳಿಸಿದರು.

ಆರ್ ಎನ್ ಎಸ್ ಸಮೂಹ ಸಂಸ್ಥೆಗಳ ಆಡಳಿತ ಅಧಿಕಾರಿ ಆಗಿರುವ ದಿನೇಶ್ ಗಾಂವಕರ್, ಆರ್ ಎನ್ ಎಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ್ ಕೆ ಎಸ್, ಸಾಂಸ್ಕೃತಿಕ ಕಾರ್ಯಕ್ರಮಗಳ ಮುಖ್ಯಸ್ಥೆ ಅಶ್ವಿನಿ ಶೇಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆರ್.ಎನ್.ಎಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಾಧವ್ ಪಿ. ಅಧ್ಯಕ್ಷತೆಯನ್ನು ವಹಿಸಿದ್ದರು.ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಕೀರ್ತಿ ಮತ್ತು ಸಂಗಡಿಗರು ಪ್ರಾರ್ಥಿಸಿದರು, ಸಂಕಲ್ಪ ಪ್ರಭು ಸ್ವಾಗತಿಸಿದರು, ರಿಷಿಕೇಶ್ ಶೆಟ್ಟಿ ವಂದಿಸಿದರು, ತ್ವಿಶಾ ಪೂಜಾರಿ ಮತ್ತು ದಿಶಾ ಭಟ್ ಕಾರ್ಯಕ್ರಮ ನಿರೂಪಿಸಿದರು.

error: