ಮುರುಡೇಶ್ವರ :- ಆರ್.ಎನ್.ಎಸ್.ಆಸ್ಪÀತ್ರೆ, ಆರ್.ಎನ್.ಎಸ್. ಸಮೂಹ ಶಿಕ್ಷಣ ಸಂಸ್ಥೆಗಳು ಮುರುಡೇಶ್ವರ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಡಾ.ಆರ್.ಎನ್. ಶೆಟ್ಟಿಯವರ 94ನೇ ಹುಟ್ಟುಹಬ್ಬದ ಮತ್ತು ಸ್ವಾತಂತ್ರö್ಯದ 75ನೇ ಸಂಭ್ರಮಾಚರಣೆಯ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವನ್ನು ಆರ್.ಎನ್.ಎಸ್. ಆಸ್ಪತ್ರೆಯಲ್ಲಿ ಏರ್ಪಡಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆರ್.ಎನ್.ಎಸ್.ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರು ಪ್ರಸಿದ್ಧ ಮಕ್ಕಳ ತಜ್ಞರಾದ ಡಾ| ಚೇತನ್ ಕಲ್ಕೂರ್ರವರು ಮಾತನಾಡಿ ರಕ್ತದಾನ ಶ್ರೇಷ್ಠದಾನ ಕಳೆದ 6 ವರ್ಷಗಳಿಂದ ನಿರಂತರವಾಗಿ ರಕ್ತÀದಾನ ಶಿಬಿರವನ್ನು ಯಶಸ್ವಿಯಾಗಿ ನಡೆಸಿರುವುದು ಸಂತೋಷ ತಂದಿದೆ. ಎಲ್ಲಾ ವಿದ್ಯಾರ್ಥಿಗಳು ಇಂತಹ ಸಮಾಜಮುಖೀ ಕಾರ್ಯಗಳಲ್ಲಿ ಭಾಗವಹಿಸುವಂತೆ ಕರೆನೀಡಿದರು. ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಚಾಂiÀið ಮಾಧವ ಪಿ. ಸ್ವಾಗತಿಸಿದರು. ವೇದಿಕೆಯಲ್ಲಿ ಆರ್.ಎನ್.ಎಸ್. ಸಮೂಹ ಸಂಸ್ಥೆಗಳ ನಿರ್ದೇಶಕರಾದ ನಾಗರಾಜ ಶೆಟ್ಟಿ, ಆಡಳಿತಾಧಿಕಾರಿ ದಿನೇಶ ಗಾಂವಕರ್, ಪ್ರಾಚಾರ್ಯರುಗಳಾದ ಡಾ| ಸಂಜಯ್ ಕೆ.ಎಸ್. ಶ್ರೀ ಸಂತೋಷ್ ಆರ್, ಶ್ರೀಮತಿ ರೇಮಿಯಾ, ಪಾಲಿಟೆಕ್ನಿಕ್ ಕಾಲೇಜಿನ ಉಪಪ್ರಾಚಾರ್ಯರಾದ ಶ್ರೀ ಮರಿಸ್ವಾಮಿ ಉಪಸ್ಥಿತರಿದ್ದರು.
More Stories
ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು: ಸಚಿವರಾದ ಶ್ರೀ ಮಂಕಾಳ್ ಎಸ್ ವೈದ್ಯ
ಬಿನಾ ವೈಧ್ಯ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಆಚರಣೆ.
ಆರ್. ಎನ್, ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ