ಮುರುಡೇಶ್ವರ:- ಆರ್ ಎನ್ ಎಸ್ ಪದವಿಪೂರ್ವ ಕಾಲೇಜ್ ಮುರುಡೇಶ್ವರದಲ್ಲಿ ಶಾರದಾ ಪೂಜೆ ಹಾಗೂ ಸಾಂಪ್ರದಾಯಿಕ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆರ್ ಎನ್ ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಯಾಗಿರುವ ದಿನೇಶ್ ಗಾಂವಕರ್ ಆಗಮಿಸಿದರು ಹಾಗೂ ಆರ್ ಎನ್ ಎಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ್ ಕೆ. ಎಸ್, ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಚಾಲಕಿ ಅಶ್ವಿನಿ ಶೇಟ್ ಉಪಸ್ಥಿತರಿದ್ದರು. ಆರ್ ಎನ್ ಎಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಾಧವ್ ಪಿ. ಅಧ್ಯಕ್ಷತೆಯನ್ನು ವಹಿಸಿದ್ದರು. ನಂತರ ವಿದ್ಯಾರ್ಥಿಗಳು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಯಾವಾಗಲೂ ಓದಿನಲ್ಲೇ ಸಮಯ ಕಳೆಯುತ್ತಿದ್ದ ವಿದ್ಯಾರ್ಥಿಗಳು ಈ ದಿನ ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸುತ್ತಿದ್ದರು ಎಲ್ಲಾ ಉಪನ್ಯಾಸಕರು
ಹಾಗೂ ಬೋಧಕೇತರ ಸಿಬ್ಬಂದಿಗಳು ಸಾಂಪ್ರದಾಯಿಕ ಉಡುಗೆ ಧರಿಸಿರುವುದು ವಿಶೇಷವಾಗಿತ್ತು.
More Stories
ಬೀನಾ ವೈದ್ಯ ಪದವಿ ಪೂರ್ವ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ:
ಭಟ್ಕಳ ತಾಲೂಕಿನ ಮುರ್ಡೇಶ್ವರದ ಬೀನಾ ವೈದ್ಯ ಎಜುಕೇಶನಲ್ ಟ್ರಸ್ಟ್ ನಲ್ಲಿ ಬೀನಾ ವೈದ್ಯ ಅಕ್ಷರ ಪರ್ವ ಸ್ಕೊಲರ್ ಶಿಪ್ 2024-25 ಯೋಜನೆ.
ಆರ್.ಎನ್.ಎಸ್ ದ್ವಿತೀಯ ಪಿಯುಸಿಉತ್ತಮ ಫಲಿತಾಂಶ