May 2, 2024

Bhavana Tv

Its Your Channel

ಸಿ. ಬಿ. ಎಸ್.ಇ ಇಂಟರ್‌ಸ್ಕೂಲ್ ಉತ್ತರಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆರ್.ಎನ್.ಎಸ್ ವಿದ್ಯಾರ್ಥಿಗಳ ಉತ್ತಮ ಸಾಧನೆ.

ಮುರುಡೇಶ್ವರ:-     ಕದಂಬ ಸಹೋದಯ ಸ್ಕೂಲ್ ಕಾಂಪ್ಲೆಕ್ಸ್ ಉತ್ತರಕನ್ನಡ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಮುರುಡೇಶ್ವರದ ಆರ್.ಎನ್.ಎಸ್ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಹಲವು ಪದಕಗಳನ್ನು ಗಳಿಸಿ ಕ್ರೀಡಾಕೂಟದ ಚಾಂಪಿಯನ್ ಶಾಲೆಯಾಗಿ ಹೊರಹೊಮ್ಮಿದೆ. ಅಂಡರ್ 14 ಹಾಗೂ ಅಂಡರ್ 17 ವಿಭಾಗದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಒಟ್ಟು 7 ಪ್ರಥಮ, 3 ದ್ವಿತೀಯ ಹಾಗೂ 5 ತೃತೀಯ ಸ್ಥಾನವನ್ನು ಗಳಿಸಿದೆ. ವಿದ್ಯಾರ್ಥಿಗಳ ಸಾಧನೆಯನ್ನು ಹಾಗೂ ಈ ಸಾಧನೆಗೆ ತರಬೇತುದಾರರಾದ ಜಯಂತ ಗೌಡ ಹಾಗೂ ಘನಶ್ಯಾಮ ನಾಯ್ಕರನ್ನು ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಅಭಿನಂದಿಸಿದ್ದಾರೆ.
error: