April 27, 2024

Bhavana Tv

Its Your Channel

ವಿಜೃಂಭಣೆಯಿoದ ಜರುಗಿದ ಮುರ್ಡೇಶ್ವರದ ಮಾತೋಬಾರ ಬ್ರಹ್ಮರಥೋತ್ಸವ

ಭಟ್ಕಳದ ಪ್ರಸಿದ್ದ ಪ್ರವಾಸಿ ತಾಣವಾದ ಮುರ್ಡೇಶ್ವರದ ಮಾತೋಬಾರ ಶ್ರೀ ಮುರ್ಡೇಶ್ವರ ದೇವರ ರಥೋತ್ಸವ ಕಾರ್ಯಕ್ರಮ ಸಾವಿರಾರು ಭಕ್ತಾಧಿಗಳ ಹರ್ಷೋದ್ಗಾರಗಳ ನಡುವೆ ವಿಜೃಂಭಣೆಯಿAದ ಶುಕ್ರವಾರ ನಡೆಯಿತು.

ಜನವರಿ 15ರಿಂದ ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿ ಜ20ರಂದು ಮಹಾರಥೋತ್ಸವ ಜರುಗಿತು. ಮಹಾರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹೋಮ ಹವನಗಳನ್ನು ವಿಧಿವತ್ತಾಗಿ ನಡೆಸಲಾಯಿತು. ಮಧ್ಯಾಹ್ನದಿಂದ ಸಾವಿರಾರು ಭಕ್ತಾಧಿಗಳು ರಥಕಾಣಿಕೆ ನೀಡಿ ಪೂಜೆ ಪುರಸ್ಕಾರ ನೆರವೇರಿಸಿ ರಥೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಂಜೆ 5.30ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಮಹಾರಥವನ್ನು ದೇವಸ್ಥಾನದ ಕೆರೆಯ ಸುತ್ತ ಭಕ್ತಾದಿಗಳ ಜಯಘೋಷದೊಂದಿಗೆ ಎಳೆಯಲಾಯಿತು. ರಥೋತ್ಸವದ ಸಂದರ್ಭದಲ್ಲಿ ಸುಮಾರು 10ಸಾವಿರಕ್ಕೂ ಅಧಿಕ ಭಕ್ತಾಧಿಗಳು ಪಾಲ್ಗೊಂಡಿದ್ದರು ಎನ್ನಲಾಗಿದೆ. ಶಾಸಕ ಸುನೀಲ ನಾಯ್ಕ, ಮಾಜಿ ಶಾಸಕ ಮಂಕಾಳ ವೈದ್ಯ, ತಹಸೀಲ್ದಾರ ಅಶೋಕ ಭಟ್, ದೇವಸ್ಥಾನದ ಟ್ರಸ್ಟಿಗಳು, ಆನಂದ ಶೆಟ್ಟಿ, ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಿದ್ದರು. ದೂರದಿಂದ ಬಂದಿರುವ ಭಕ್ತರ ಹಿತ ದೃಷ್ಟಿಯಿಂದ ಪೊಲೀಸರು ಉತ್ತಮ ಬಂದೋಬಸ್ತ ನೀಡಿದ್ದರು. ಭಕ್ತರ ವಾಹನ ಪಾರ್ಕಿಂಗಿಗಾಗಿ ಪೇ ಎಂಡ್ ಪಾರ್ಕ ಸೌಲಭ್ಯ ಒದಗಿಸಲಾಗಿತ್ತು.

error: