ಶಿರಾಲಿ: ೨೦೨೦-೨೧ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಸಿದ್ದಾರ್ಥ ಆಂಗ್ಲ ಮಾದ್ಯಮ ಪ್ರೌಢಶಾಲೆ ಶಿರಾಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಾಗಿದೆ. ಕುಮಾರಿ ಸುಪ್ರೀತಾ ರಾಜೇಶ ಶೆಟ್ಟಿ ೬೨೫ ಅಂಕಗಳಿಗೆ ೬೧೪ ಅಂಕ (೯೮.೨೪) ಪಡೆದು ಪ್ರಥಮ ಸ್ಥಾನ ಪಡೆದಿದ್ದಾಳೆ. ಕುಮಾರಿ ಭಾನುಪ್ರಿಯ ಕೃಷ್ಣ ನಾಯ್ಕ ೬೨೫ ಕ್ಕೆ ೬೧೩ (೯೮.೦೮) ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಕುಮಾರ ನಿಖಿಲ್ ಉದಯ ನಾಯ್ಕ ೬೨೫ ಕ್ಕೆ ೬೧೦ (೯೭.೬) ಅಂಕಗಳೊAದಿಗೆ ತೃತೀಯ ಸ್ಥಾನ ಪಡೆದಿದ್ದಾನೆ.
೧೧ ವಿದ್ಯಾರ್ಥಿಗಳು ಶೇಕಡಾ ೯೦ಕ್ಕಿಂತ ಹೆಚ್ಚಿನ ಅಂಕ ಪಡೆದಿದ್ದಾರೆ ಹಾಗೂ ೧೮ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, ೫೨ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಗಣಿತ ವಿಷಯದಲ್ಲಿ ೪ ವಿದ್ಯಾರ್ಥಿಗಳು, ಹಿಂದಿ ವಿಷಯದಲ್ಲಿ ೩ ವಿದ್ಯಾರ್ಥಿಗಳು, ಇಂಗ್ಲೀಷ್ ವಿಷಯದಲ್ಲಿ ೨ ವಿದ್ಯಾರ್ಥಿಗಳು ಹಾಗೂ ವಿಜ್ಞಾನ ಮತ್ತು ಸಮಾಜ ವಿಜ್ಞಾನದಲ್ಲಿ ತಲಾ ೧ ವಿದ್ಯಾರ್ಥಿ ೧೦೦ ಕ್ಕೆ ೧೦೦ ಅಂಕ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಕಾರ್ಯದರ್ಶಿಗಳು, ಮುಖ್ಯೊಪಾಧ್ಯಾಯರು ಮತ್ತು ಸಹ-ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
More Stories
ಶಿರಾಲಿ ಸಾರದಾಹೊಳೆ ಶ್ರೀ ಹಳೆಕೋಟೆ ಹನುಮಂತ ದೇವಸ್ಥಾನ ಪ್ರವಾಸಿ ತಾಣವನ್ನಾಗಿ ಪರಿವರ್ತಿಸಲು ಚರ್ಚೆ
ತಾಲೂಕಾ ಮಟ್ಟದ ಸ್ವ ಉದ್ಯೋಗ ತರಬೇತಿ ಶಿಬಿರ
ಆಟೋ ಚಾಲಕರಿಂದ ಹೋಳಿ ಹಣ, ಸ್ನೇಹ ವಿಶೇಷ ಚೇತನ ಮಕ್ಕಳ ಶ್ರೇಯೋಭಿವೃದ್ಧಿಗೆ