April 20, 2024

Bhavana Tv

Its Your Channel

ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ

ಶಿರಾಲಿ: ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ ನಡೆದ ದುರ್ಘಟನೆಯಲ್ಲಿ ಭಟ್ಕಳ ತಾಲೂಕಿನ ಪಡುಶಿರಾಲಿ ನಿವಾಸಿ ವಿಜೇತ ಗಣಪತಿ ನಾಯ್ಕ ಎಂಬ ೪ ವರ್ಷದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಅಂದು ಶವಾಗರಕ್ಕೆ ಶಾಸಕ ಸುನೀಲ್ ನಾಯ್ಕ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನವನ್ನು ಹೇಳುವುದರೊಂದಿಗೆ ಪರಿಹಾರಕ್ಕಾಗಿ ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿದ್ದರು. ಅದರಂತೆ ಕುಟುಂಬಕ್ಕೆ ಸರ್ಕಾರದಿಂದ ೫ ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಿಸಲಾಗಿದ್ದು ಇಂದು ಶುಕ್ರವಾರ ಮೃತ ಬಾಲಕನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಆದೇಶ ಪ್ರತಿಯನ್ನು ಹಸ್ತಾಂತರಿಸಿದರು.

ಕoದಮ್ಮನ ಆತ್ಮಕ್ಕೆ ಆ ದೇವರು ಚಿರಶಾಂತಿಯನ್ನು ನೀಡಲಿ ಎಂದು ಪ್ರಾರ್ಥಿಸಿ ಕುಟುಂಬದವರಿಗೆ ಸ್ವಾಂತವನ್ನು ಹೇಳಿದರು

error: