ಶಿರಾಲಿ: ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ ನಡೆದ ದುರ್ಘಟನೆಯಲ್ಲಿ ಭಟ್ಕಳ ತಾಲೂಕಿನ ಪಡುಶಿರಾಲಿ ನಿವಾಸಿ ವಿಜೇತ ಗಣಪತಿ ನಾಯ್ಕ ಎಂಬ ೪ ವರ್ಷದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಅಂದು ಶವಾಗರಕ್ಕೆ ಶಾಸಕ ಸುನೀಲ್ ನಾಯ್ಕ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನವನ್ನು ಹೇಳುವುದರೊಂದಿಗೆ ಪರಿಹಾರಕ್ಕಾಗಿ ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿದ್ದರು. ಅದರಂತೆ ಕುಟುಂಬಕ್ಕೆ ಸರ್ಕಾರದಿಂದ ೫ ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಿಸಲಾಗಿದ್ದು ಇಂದು ಶುಕ್ರವಾರ ಮೃತ ಬಾಲಕನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಆದೇಶ ಪ್ರತಿಯನ್ನು ಹಸ್ತಾಂತರಿಸಿದರು.
ಕoದಮ್ಮನ ಆತ್ಮಕ್ಕೆ ಆ ದೇವರು ಚಿರಶಾಂತಿಯನ್ನು ನೀಡಲಿ ಎಂದು ಪ್ರಾರ್ಥಿಸಿ ಕುಟುಂಬದವರಿಗೆ ಸ್ವಾಂತವನ್ನು ಹೇಳಿದರು
More Stories
ಶಿರಾಲಿ ಸಾರದಾಹೊಳೆ ಶ್ರೀ ಹಳೆಕೋಟೆ ಹನುಮಂತ ದೇವಸ್ಥಾನ ಪ್ರವಾಸಿ ತಾಣವನ್ನಾಗಿ ಪರಿವರ್ತಿಸಲು ಚರ್ಚೆ
ತಾಲೂಕಾ ಮಟ್ಟದ ಸ್ವ ಉದ್ಯೋಗ ತರಬೇತಿ ಶಿಬಿರ
ಆಟೋ ಚಾಲಕರಿಂದ ಹೋಳಿ ಹಣ, ಸ್ನೇಹ ವಿಶೇಷ ಚೇತನ ಮಕ್ಕಳ ಶ್ರೇಯೋಭಿವೃದ್ಧಿಗೆ