ಭಟ್ಕಳ : ಶಿರಾಲಿ ಸಾರದಾಹೊಳೆ ಶ್ರೀ ಹಳೆಕೋಟೆ ಹನುಮಂತ ದೇವಸ್ಥಾನವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ದಾನಿಗಳ ಸಹಕಾರ ಕೋರುತ್ತಿದ್ದೇವೆ ಎಂದು ಹಳೇಕೋಟೆ ಶ್ರೀ ಹನುಮಂತ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಆರ್.ಕೆ. ನಾಯ್ಕ ಹೇಳಿದರು.
ಅವರು ದೇವಸ್ಥಾನದ ಸಭಾಭವನದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಹಿಂದುಳಿದ ವರ್ಗದವರ ಆಡಳಿತಕ್ಕೊಳಪಟ್ಟು ಪ್ರಸಿದ್ಧಿ ಪಡೆದಿರುವ ದೇವಸ್ಥಾನ ಇದಾಗಿದ್ದು, ದೇವಸ್ಥಾನ ಹಾಗೂ ಇಲ್ಲಿನ ಮೂಲಭೂತ ಸೌಕರ್ಯವನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ನಿವೇಶನ ಖರೀದಿ ಪ್ರಯತ್ನ ನಡೆದಿದೆ. ದೇವಸ್ಥಾನದ ಎದುರಿನ ಸಭಾಭವನವನ್ನು ಸ್ಥಳಾಂತರಿಸುವ ಚಿಂತನೆ ಇದ್ದು, ಪರ್ಯಾಯ ಕ್ರಮದ ಬಗ್ಗೆ ಸಮಾಲೋಚನೆ ನಡೆದಿದೆ. ದೇವಸ್ಥಾನಕ್ಕೆ ಸಂಬAಧಪಟ್ಟ ಅನತಿ ದೂರದಲ್ಲಿ ಇರುವ ಐತಿಹಾಸಿಕ ಹಳೆಕೋಟೆಯನ್ನು ಸೇರಿಸಿಕೊಂಡು ಇಡೀ ಕ್ಷೇತ್ರವನ್ನು ಪ್ರವಾಸಿ ತಾಣವನ್ನಾಗಿ ಪರಿವರ್ತಿಸಲು ಚರ್ಚಿಸಲಾಗಿದೆ. ದೇವಸ್ಥಾನದ ಸುತ್ತ ಸುಭದ್ರ ಕಂಪೌAಡ್, ಪ್ರವಾಸಿಗರ ಅನುಕೂಲಕ್ಕಾಗಿ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸುವ ಗುರಿ ಇದೆ. ದೇಶ-ವಿದೇಶಗಳಲ್ಲಿ ನೆಲೆಸಿರುವ ಭಕ್ತರನ್ನು ಒಂದೆಡೆ ಸೇರಿಸಿ ಚಿಂತನ-ಮAಥನ ಕಾರ್ಯಕ್ರಮ ನಡೆಸುವ ಅಭಿಲಾಷೆಯೂ ಇದೆ ಎಂದು ವಿವರಿಸಿದರು
ಸಾರದಾಹೊಳೆ ಶ್ರೀ ಹಳೆಕೋಟಿ ಹನುಮಂತ ದೇವಸ್ಥಾನದ ಅಭಿವೃದ್ಧಿಗೆ ಈ ಹಿಂದೆ ಶಾಸಕರಾಗಿದ್ದ ಸುನೀಲ್ ನಾಯ್ಕ ಪ್ರಯತ್ನದಲ್ಲಿ 50 ಲಕ್ಷ ರು. ಅನುದಾನ ಹರಿದು ಬಂದಿತ್ತು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಪ್ರಯತ್ನದೊಂದಿಗೆ ಸರಕಾರದಿಂದ 1 ಕೋ. ರು. ಮಂಜೂರಾಗಿದ್ದು, ಜಿಲ್ಲಾಡಳಿತದ ಖಾತೆಗೆ ಈಗಾಗಲೇ ಜಮೆಯಾಗಿದೆ. ಇದಕ್ಕಾಗಿ ಸಚಿವರಿಗೆ ದೇವಸ್ಥಾನದ ವತಿಯಿಂದ ಅಭಿನಂದನೆ ಸಲ್ಲಿಸುತ್ತಿದ್ದೇವೆ. ಏಪ್ರಿಲ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾಪನೆ ವರ್ಧಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮಕ್ಕೂ ಮುನ್ನ ಸರಕಾರದ ಅನುದಾನ ದೇವಸ್ಥಾನವನ್ನು ತಲುಪಲಿ ಎನ್ನುವ ಆಶಯ ನಮ್ಮದಾಗಿದೆ ಎಂದು ದೇವಸ್ಥಾನದ ಅಧ್ಯಕ್ಷ ಆರ್. ಕೆ. ನಾಯ್ಕ ತಿಳಿಸಿದರು.
ದೇವಸ್ಥಾನದ ಮೊಕ್ತೆಸರ ಸುಬ್ರಾಯ ನಾಯ್ಕ ತೆರ್ನಮಕ್ಕಿ, ಮಾವಳ್ಳಿ ಹೋಬಳಿ ನಾಮಧಾರಿ ಅಭಿವೃದ್ಧಿ ಸಂಘದ ನಿಕಟಪೂರ್ವ ಅಧ್ಯಕ್ಷ ಸುಬ್ರಾಯ ನಾಯ್ಕ ಗುಮ್ಮನಹಕ್ಕು ಮಾತನಾಡಿದರು. ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷ ನಾಗೇಂದ್ರ ನಾಯ್ಕ, ಪ್ರಧಾನ ಕಾರ್ಯದರ್ಶಿ ವಾಸು ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.
More Stories
ತಾಲೂಕಾ ಮಟ್ಟದ ಸ್ವ ಉದ್ಯೋಗ ತರಬೇತಿ ಶಿಬಿರ
ಆಟೋ ಚಾಲಕರಿಂದ ಹೋಳಿ ಹಣ, ಸ್ನೇಹ ವಿಶೇಷ ಚೇತನ ಮಕ್ಕಳ ಶ್ರೇಯೋಭಿವೃದ್ಧಿಗೆ
ಹೊನ್ನಪ್ಪಯ್ಯ ಗುನಗ ರವರ ಆರನೇಯ ಕೃತಿ -“ಮನೋಬಲ” ಕಥಾ ಸಂಕಲನ ಬಿಡುಗಡೆ