April 29, 2024

Bhavana Tv

Its Your Channel

ಹೆಗ್ಗರಣಿ ಪ್ರೌಢಶಾಲೆಯಲ್ಲಿ ಸಂಸ್ಥಾಪಕರ ಸ್ಮಾರಕ ಮಹಾದ್ವಾರ ಹಾಗೂ ಸಭಾಭವನ ಉದ್ಘಾಟನೆ

ವರದಿ: ವೇಣುಗೋಪಾಲ ಮದ್ಗುಣಿ

ಸಿದ್ಧಾಪುರ : ಶಿಕ್ಷಣ ಸೇವಾ ಸಮಿತಿ ಹಾಗೂ ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಹೆಗ್ಗರಣಿ ಷಷ್ಠಿ ಪೂರಣ ಮಹೋತ್ಸವ ಸಮಿತಿ ವತಿಯಿಂದ ನೂತನವಾಗಿ ನಿರ್ಮಿಸಲಾದ ಸಂಸ್ಥಾಪಕರ ಸ್ಮಾರಕ ಮಹಾದ್ವಾರ ಶಿಲಾ ಫಲಕದ ಅನಾವರಣ ಹಾಗೂ ಅನ್ನಪೂರ್ಣ ಸಭಾಭವನ ಉದ್ಘಾಟನಾ ಕಾರ್ಯಕ್ರಮ ಪರಮಪೂಜ್ಯ ಶ್ರೀ ಶ್ರೀಮದ್ ಗಂಗಾಧರೇAದ್ರ ಸರಸ್ವತೀ ಮಹಾಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು.
ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರ ಅವರು ಪರಮಪೂಜ್ಯರ ಹಾಗೂ ಗಣ್ಯರ ಜೊತೆಗೂಡಿ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರಯ ಹೆಗಡೆ ಕಾಗೇರಿ, ರಾಮ ಮಂದಿರ ನಿರ್ಮಾಣ ಕಾರ್ಯದ ಉಸ್ತುವಾರಿ ಹಾಗೂ ವಿಶ್ವ ಹಿಂದು ಪರಿಷತ್ತಿನ ಸಂಘಟನಾ ಮಂತ್ರಿಗಳಾದ ಗೋಪಾಲ ಹಾಗೂ ಸ್ಥಳೀಯ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.

error: