May 21, 2024

Bhavana Tv

Its Your Channel

ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆಶ್ರಯದಲ್ಲಿ ಶ್ರದ್ಧೆ ಮತ್ತು ಗೌರವ ಪೂರ್ವಕವಾಗಿ ಸ್ವಾತಂತ್ರ‍್ಯೋತ್ಸವವನ್ನು ಆಚರಿಸಲು ನಿರ್ಧಾರ.

ಶಿರಸಿ: ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆಶ್ರಯದಲ್ಲಿ ೭೫ ನೇ ಸ್ವಾತಂತ್ರೋತ್ಸವವನ್ನು ಭೂಮಿ ಹಕ್ಕು ವಂಚಿತರಿಗೆಲ್ಲಿ ಸ್ವಾತಂತ್ರö್ಯ………..? ಎಂಬ ಘೋಷಣೆಯೊಂದಿಗೆ ಶಿರಸಿಯ ಹೋರಾಟಗಾರರ ವೇದಿಕೆಯ ಕಾರ್ಯಾಲಯದಲ್ಲಿ ಇಂದು ೮:೩೦ ಕ್ಕೆ ಶ್ರದ್ಧೆ ಮತ್ತು ಗೌರವ ಪೂರ್ವಕವಾಗಿ ಸ್ವಾತಂತ್ರ‍್ಯೋತ್ಸವವನ್ನು ಆಚರಿಸಲಾಗುವುದೆಂದು ವೇದಿಕೆ ಜಿಲ್ಲಾ ಅಧ್ಯಕ್ಷ ರವೀಂದ್ರ ನಾಯ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭೂಮಿ ಹಕ್ಕನ್ನು ಸಂವಿಧಾನಾತ್ಮಕವಾದ ಹಕ್ಕು ಎಂದು ಪ್ರತಿಪಾದಿಸುವ ಹಾಗೂ ಅರಣ್ಯವಾಸಿಗಳ ಸಮಸ್ಯೆಗಳನ್ನು ಸ್ವಾತಂತ್ರ‍್ಯೋತ್ಸವದoದು ಸರಕಾರದ ಗಮನ ಸೆಳೆಯಲಾಗುವುದೆಂದು ಅವರು ಹೇಳಿದರು.
ಆಸಕ್ತರು ವಿಶಿಷ್ಟ ರೀತಿಯಲ್ಲಿ ಆಚರಿಸುವ ಸ್ವಾಸ್ವಾತಂತ್ರ‍್ಯೋತ್ಸವದ ಕಾರ್ಯಕ್ರಮಕ್ಕೆ ಆಗಮಿಸಬೇಕಾಗಿ ಅವರು ತಿಳಿಸಿದ್ದಾರೆ.

error: