ಶಿರಸಿ: ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಶಿರಸಿಯ ಅನಂತ ರಾಮನಾಥ ಹೆಗಡೆ, ಹುಡ್ಲಮನೆ ಅವರು ಪದವಿ ಅಧಿಕಾರ ಪ್ರಮಾಣ ವಚನವನ್ನು ಇಂದು ಸ್ವೀಕಾರ ಮಾಡಿರುವ ಹಿನ್ನೆಲೆಯಲ್ಲಿ ಶಿರಸಿ ವಕೀಲ ಸಂಘದಲ್ಲಿ ಹರ್ಷ ವ್ಯಕ್ತವಾಗಿರುವುದು ವರದಿಯಾಗಿದೆ.
ಶಿರಸಿ ವಕೀಲ ಸಂಘದ ಸದಸ್ಯರಾಗಿ ಉಚ್ಚ ನ್ಯಾಯಾಲಯದಲ್ಲಿ ದಶಕಗಳ ಕಾಲ ವಕೀಲ ವೃತ್ತಿಯಿಂದ ನೇರವಾಗಿ ಉಚ್ಚ ನ್ಯಾಯಾಲಯಕ್ಕೆ ನ್ಯಾಯಮೂರ್ತಿಯಾಗಿ ನೇಮಕವಾಗಿರುವದು ಶಿರಸಿ ವಕೀಲರ ಹರ್ಷಕ್ಕೆ ಕಾರಣವಾಗಿತ್ತು.
ಬೆಂಗಳೂರಿನ ರಾಜಭವನದಲ್ಲಿ ಗಾಜಿನ ಮನೆಯಲ್ಲಿ ಇಂದು ಮುಂಜಾನೆ ೯:೩೦ ಕ್ಕೆ ಇನ್ನಿತರ ಎರಡು ಸಹ ನ್ಯಾಯಮೂರ್ತಿಯೊಂದಿಗೆ ಕರ್ನಾಟಕ ರಾಜ್ಯಪಾಲರಾದ ತಾವರ್ ಚಂದ್ ಗೆಲೋಟ ಅವರಿಂದ ಪದವಿ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಸಂದರ್ಭದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ತಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಪಸ್ಥಿತಗೊಂಡಿರುವದು ವಿಶೇಷವಾಗಿತ್ತು. ಪದವಿ ಅಧಿಕಾರ ಪ್ರಮಾಣ ವಚನ ಸಾಕ್ಷಿಕರಿಸಲು ಸಾಕಷ್ಟು ಪ್ರಮಾಣದಲ್ಲಿ ಶಿರಸಿ, ಜಿಲ್ಲೆಯ ವಿವಿಧ ಕಡೆಯಿಂದ ಹಾಗೂ ಧಾರವಾಡ ಇನ್ನಿತರ ವಕೀಲರು ಭಾಗವಹಿಸಿದ್ದರು.
More Stories
ಮೇಸ್ತಾ ಪ್ರಕರಣದಲ್ಲಿ ಕಾಗೇರಿಯಿಂದ ಕೀಳುಮಟ್ಟದ ಹೇಳಿಕೆ ನಿರೀಕ್ಷಿಸಿರಲಿಲ್ಲ: ದೇಶಪಾಂಡೆ
ಶೂನ್ಯ ಸಾಧನೆ ಮುಚ್ಚಿಡಲು ಬಿಜೆಪಿಯಿಂದ ಮತ್ತೆ ಮೇಸ್ತಾ ಪ್ರಕರಣ ಮುನ್ನೆಲೆಗೆ: ಭೀಮಣ್ಣ ನಾಯ್ಕ
ಮೇಸ್ತಾ ಪ್ರಕರಣದಲ್ಲಿ ಯುವಕರ ಮೇಲೆ ಮಾತ್ರ ಯಾಕೆ ಕೇಸ್ ದಾಖಲಾಯಿತು, ಕಾಗೇರಿ ಮೇಲೆ ಯಾಕಾಗಿಲ್ಲ? ಡಾ.ಅಂಜಲಿ ಪ್ರಶ್ನೆ