ಶಿರಸಿ: ಅರಣ್ಯ ಇಲಾಖೆಯ ಜಿಲ್ಲೆಯ ಹಿರಿಯ ಅಧಿಕಾರಿಗಳಾದ ಅರಣ್ಯ ಸಂರಕ್ಷಣಾಧಿಕಾರಿ, ಕೆನರಾ ವೃತ್ತ, ಶಿರಸಿ ಅವರೊಂದಿಗೆ ಜೂನ್ 30 ಗುರುವಾರ ಮುಂಜಾನೆ 10:30 ಕ್ಕೆ ಹೋರಾಟಗಾರರ ವೇದಿಕೆಯ ಸದಸ್ಯರೊಂದಿಗೆ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಚರ್ಚಿಸುವ ಸಭೆ ನಿಗದಿಗೊಳಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವಿಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತ್ತೀಚಿಗೆ ನಿರಂತರ ಅರಣ್ಯ ಸಿಬ್ಬಂದಿಗಳಿAದ ಅರಣ್ಯವಾಸಿಗಳ ಮೇಲೆ ಕಿರುಕುಳ, ದೌರ್ಜನ್ಯ, ಮಾನಸಿಕ ಹಿಂಸೆ ಮತ್ತು ಕಾನೂನಿಗೆ ವ್ಯತಿರಿಕ್ತವಾಗಿ ಅರಣ್ಯ ಇಲಾಖೆ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಈ ಸಭೆಯನ್ನು ಸಂಘಟಿಸಲಾಗಿದೆ. ಆಸಕ್ತ ಅರಣ್ಯವಾಸಿಗಳು ಆಗಮಿಸಲು ಪ್ರಕಟಣೆಯಲ್ಲಿ ಕೋರಿದ್ದಾರೆ
More Stories
ಬಿಜೆಪಿ ನಾಯಕರು ನಡೆಸಿಕೊಂಡ ರೀತಿಗೆ ಬೇಸರಗೊಂಡು ಕಾಂಗ್ರೆಸ್ ಸೇರಿದ್ದೇವೆ: ವಿವೇಕ್ ಹೆಬ್ಬಾರ್
ಮಲಗಿದ್ದವರ ಮೇಲೆ ಹರಿದ ಕಾರು : ಮಗು ಸೇರಿ ಇಬ್ಬರು ಗಂಭೀರ
ಸ್ವರ್ಣವಲ್ಲಿ ಸ್ವಾಮಿಗಳ ಆಶೀರ್ವಾದ ಪಡೆದ ಡಾ|| ಅಂಜಲಿ