May 16, 2024

Bhavana Tv

Its Your Channel

ಅಭಯಾರಣ್ಯ- ಕಸ್ತೂರಿ ರಂಗನ ವರದಿ ; ಜಿಲ್ಲೆಯ ಅಭಿವೃಧ್ದಿಗೆ ಮಾರಕ- ಅರಣ್ಯವಾಸಿಗಳಿಗೆ ಆತಂಕ.

ಶಿರಸಿ: ಇತ್ತೀಚಿನ ಕಸ್ತೂರಿ ರಂಗನ ವರದಿ ಕರಡು ಅಧಿಸೂಚನೆ ಹಾಗೂ ಶರಾವತಿ ಅಭಯಾರಣ್ಯ ಪರಿಸರ ಅತೀ ಸೂಕ್ಷö್ಮ ಪ್ರದೇಶ ನಿಗದಿಗೊಳಿಸಲು ಸುಫ್ರೀಂಕೋರ್ಟನ ಆದೇಶದಿಂದ ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ
ಮಾರಕವಾಗುವುದಲ್ಲದೇ ಅರಣ್ಯ ಭೂಮಿ ಅವಲಂಭಿತವಾಗಿರುವ ಅರಣ್ಯವಾಸಿಗಳಿಗೆ ಆತಂಕ ಉಂಟಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ಹೇಳಿದ್ದಾರೆ.

ಪಶ್ಚಿಮ ಘಟ್ಟದ ಜೀವ ವೈವಿಧ್ಯ ರಕ್ಷಣೆ ಮತ್ತು ಸಂರಕ್ಷಣೆ ಉದ್ದೇಶದಿಂದ ಕೇಂದ್ರ ಪರಿಸರ, ಅರಣ್ಯ ಸಚಿವಾಲಯವು ಕಸ್ತೂರಿ ರಂಗನ ವರದಿಯಂತೆ ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾದ ಪ್ರದೇಶದಲ್ಲಿ ಕರ್ನಾಟಕ ರಾಜ್ಯದ ವಿವಿಧ ಹತ್ತು ಜಿಲ್ಲೆಗಳಲ್ಲಿ ಒಟ್ಟು 1597 ಹಳ್ಳಿಗಳನ್ನು ಸೇರ್ಪಡಿಸಲಾಗಿದ್ದು, ಅದರಂತೆ ಉತ್ತರ
ಕನ್ನಡ ಜಿಲ್ಲೆಯ 9 ತಾಲೂಕುಗಳಿಂದ 704 ಹಳ್ಳಿಗಳು ಸೇರ್ಪಡೆಗೊಂಡಿರುವುದು ಎಂದು ಅವರು ಹೇಳಿದರು. ಅಲ್ಲದೇ, ಈಗಾಗಲೇ ಶರಾವತಿ ಅಭಯಾರಣ್ಯ ವ್ಯಾಪ್ತಿಯ ಜುಲೈ 7, 2019 ರ ಅಧಿಸೂಚನೆಯಂತೆ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ಒಟ್ಟು 93,016 ಹೇಕ್ಟರ್ ಪ್ರದೇಶ ಸೇರಿಸಲ್ಪಟ್ಟಿದ್ದಲ್ಲದೇ, ಗುರುತಿಸಿರುವ ಅಭಯಾರಣ್ಯ ಪ್ರದೇಶದ ಗಡಿಯಿಂದ 1 ಕೀ.ಮೀ ಹೇಚ್ಚುವರಿಯಾಗಿ ಅತೀ ಸೂಕ್ಷ್ಮ ಪ್ರದೇಶ ನಿರ್ದಿಷ್ಟ ಪಡಿಸಬೇಕೆಂಬ ಇತ್ತೀಚಿನ ಸುಫ್ರೀಂ ಕೋರ್ಟನ ಆದೇಶದಿಂದ ಜಿಲ್ಲೆಯ ಸಂಪೂರ್ಣ ಜನಜೀವನದ ವ್ಯವಸ್ಥೆಯ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುವಂತಾಗಿದೆ ಎಂದು ಅವರು ಹೇಳಿದರು.

ಅಭೀವೃದ್ಧಿಗೆ ಮಾರಕ :
ಕಸ್ತೂರಿರಂಗನ್ ಮತ್ತು ಅಭಯಾರಣ್ಯ ಪ್ರದೇಶದಲ್ಲಿ ಗುರುತಿಸಲಾದ ಸೂಕ್ಷ್ಮ ಪ್ರದೇಶದಲ್ಲಿ ಶಾಶ್ವತ ಕಟ್ಟಡ, ರಸ್ತೆ, ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿAದ ನಿರ್ಭಂದಿಸಿದ ಕೈಗಾರಿಕೆಗಳಿಗೆ ಕಡಿವಾಣ, ಆಧುನಿಕ
ಪ್ರವಾಸೋಧ್ಯಮಕ್ಕೆ ಮಾರಕ, ಟೌನ್‌ಶಿಫ್ ಮತ್ತು ಬಹುಮಡಿಗೆ ಕಟ್ಟಡಗಳಿಗೆ ನಿರ್ಭಂದ, ವಾಣಿಜ್ಯಕರಣ ಮುಂತಾದ ನಿರ್ಭಂದಕಕೆ ಒಳಪಡುವದರಿಂದ ಗ್ರಾಮಸ್ಥರ ಜೀವನ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರುವುದಲ್ಲದೇ
ಅಭೀವೃದ್ದಿಗೆ ಮಾರಕ ಉಂಟಾಗುವುದು ಎಂದು ಅವರು ಹೇಳಿದರು.

ಜಿಲ್ಲೆಯ ಶೇ. 35 ರಷ್ಟು ಪರಿಸರ ಸೂಕ್ಷ್ಮ ಪ್ರದೇಶ :
ಕಸ್ತೂರಿರಂಗನ್ ಮತ್ತು ಅಭಯಾರಣ್ಯ ಪ್ರದೇಶದ ಒಟ್ಟು ಕ್ಷೇತ್ರ ಹಾಗೂ ಈ ಪ್ರದೇಶಕ್ಕೆ ಹೇಚ್ಚುವರಿಯಾಗಿ ಅತೀ ಸೂಕ್ಷ್ಮ ಪ್ರದೇಶವೆಂದು ಗುರುತಿಸುವ ಕ್ಷೇತ್ರವನ್ನು ಜಿಲ್ಲೆಯ ಒಟ್ಟು ಭೌಗೋಳಿಕ ಕ್ಷೇತ್ರವಾದ 10,571 ಚ.ಕೀ.ಮೀ ಗೆ ತುಲನೆ ಮಾಡಿದರೆ, ಜಿಲ್ಲೆಯ ಒಟ್ಟು ಕ್ಷೇತ್ರದಲ್ಲಿ ಪರಿಸರ ಸೂಕ್ಷö್ಮ ಪ್ರದೇಶ ಶೇ. 35ರಷ್ಟು ಆಗುವುದೆಂದು ರವೀಂದ್ರ ನಾಯ್ಕ ಹೇಳಿದ್ದಾರೆ.

error: