May 3, 2024

Bhavana Tv

Its Your Channel

ಅರಣ್ಯ ಸಚಿವ ಕತ್ತಿ ನಿಧನಕ್ಕೆ ಹೋರಾಟಗಾರರ ವೇದಿಕೆಯ ಸಂತಾಪ.

ಶಿರಸಿ: ಕರ್ನಾಟಕ ಸರಕಾರದ ಅರಣ್ಯ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತೀವ್ರ ಸಂತಾಪವನ್ನ ವ್ಯಕ್ತಪಡಿಸಿದ್ದಾರೆ.

ಬೆಳಗಾಂವ ವಿಧಾನ ಸಭಾ ಅಧಿವೇಶನ ಸಂದರ್ಭದಲ್ಲಿ ಹೋರಾಟಗಾರರ ವೇದಿಕೆಯು ಹಮ್ಮಿಕೊಂಡAತಹ ಬೆಳಗಾವಿ ಚಲೋ ಕಾರ್ಯಕ್ರಮದಲ್ಲಿ ಹಾಗೂ ಪ್ರಸಕ್ತ ವರ್ಷದ ಫೇಬ್ರವರಿ ಮೂರನೇ ವಾರದಂದು ಬೆಂಗಳೂರು ವಿಧಾನ ಸೌಧದಲ್ಲಿ ಜರುಗಿದ ಅರಣ್ಯವಾಸಿಗಳ ಸಮಸ್ಯೆಗಳಿಗೆ ಸ್ಫಂದಿಸಿ ಜರುಗಿದ ಉನ್ನತ ಮಟ್ಟದ ಸಭೆಯಲ್ಲಿ ಅರಣ್ಯವಾಸಿಗಳ ಸಮಸ್ಯೆಗಳನ್ನ ಮಂಡಿಸಲು ಹಾಗೂ ಸಮಸ್ಯೆಗಳನ್ನ ಬಗೆಹರಿಸುವ ದಿಶೆಯಲ್ಲಿ ಆಸಕ್ತಿ ವಹಿಸಿದ್ದರು ಈ ಸಂದರ್ಭದಲ್ಲಿ ರವೀಂದ್ರ ನಾಯ್ಕ ಅವರನ್ನು ಸ್ಮರಿಸಿಕೊಂಡರು.

error: