May 3, 2024

Bhavana Tv

Its Your Channel

ಅರಣ್ಯ ಭೂಮಿ ಹೋರಾಟ 32 ನೇ ವರ್ಷಕ್ಕೆ ಪಾದಾರ್ಪಣೆ ; ಸಮಸ್ಯೆ ಬಗೆಹರಿಸಲು ಅಗ್ರಹಿಸಿ ‘ಉರುಳು ಸೇವೆ’ ಮೂಲಕ ಪ್ರತಿಭಟನೆ.

ಶಿರಸಿ: ಅರಣ್ಯವಾಸಿಗಳ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆಶ್ರಯದಲ್ಲಿ ಜಿಲ್ಲೆ ಮತ್ತು ರಾಜ್ಯದಲ್ಲಿ ಅರಣ್ಯ ಭೂಮಿ ಹಕ್ಕಿನ ಹೋರಾಟವು 32ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸಪ್ಟೆಂಬರ್ 13, ಮಂಗಳವಾರ
ಶಿರಸಿಯಲ್ಲಿ ಅರಣ್ಯವಾಸಿಗಳ ಸಮಸ್ಯೆಗಳನ್ನ ಸರಕಾರದ ಗಮನ ಸೆಳೆಯುವ ಉದ್ದೇಶದಿಂದ ಮುಂಜಾನೆ 10:00 ಗಂಟೆಗೆ ಶಿರಸಿ ಮಾರಿಕಾಂಬ ದೇವಾಲಯದ ಎದುರು “ಉರುಳು ಸೇವೆ” ಹಾಗೂ ತದನಂತರ ಮಾರಿಕಾಂಬ ಕಲ್ಯಾಣಮಂಟಪದಲ್ಲಿ ಸಭೆ ಜರುಗಿಸಲಾಗುತ್ತಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರಣ್ಯ ಹಕ್ಕು ಕಾಯಿದೆಯಲ್ಲಿ ಸುಮಾರು 85,000 ಅರಣ್ಯವಾಸಿಗಳು ಅರ್ಜಿ ಸಲ್ಲಿಸಿದ್ದು, ಸರಕಾರ ಮತ್ತು ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಹಾಗೂಕಾನೂನಿನಲ್ಲಿ ವ್ಯತಿರಿಕ್ತವಾಗಿ ಕಾನೂನಿನ ವಿಧಿವಿದಾನ ಅನುಸರಿಸದೇ 3ದಶಕದಿಂದ ಅರಣ್ಯ ಭೂಮಿ ಹಕ್ಕಿಗಾಗಿ ವಿವಿಧ ರೀತಿಯ ಹೋರಾಟಜರುಗಿದ್ದಾಗಿಯೂ ಅರಣ್ಯವಾಸಿಗಳು ಭೂಮಿ ಹಕ್ಕಿನಿಂದ ವಂಚಿತರಾಗುತ್ತಿರುವುದು ವಿಷಾದಕರ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಾಗೂ ನಂತರ ಜರುಗುವ ಸಭೆಯಲ್ಲಿ
ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲಾಗುವುದೆಂದು ಅವರುತಿಳಿಸಿದರು.
ಆಸಕ್ತ ಅರಣ್ಯ ಅತಿಕ್ರಮಣದಾರರು ಕಾರ್ಯಕ್ರಮಕ್ಕೆ ಆಗಮಿಸಬೇಕಾಗಿ ರವೀಂದ್ರ ನಾಯ್ಕ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

error: