ಶಿರಸಿ: ಅರಣ್ಯ ಭೂಮಿ ಹಕ್ಕಿನ ಹೋರಾಟವು 32 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ಅರಣ್ಯವಾಸಿಗಳ ಸಮಸ್ಯೆಗಳನ್ನ ಸರಕಾರದ ಗಮನ ಸೆಳೆಯುವ ಉದ್ದೇಶದಿಂದ ವಿಶಿಷ್ಟ ಸಾಂಸ್ಕçತಿಕ ವಾದ್ಯ, ಡೊಳ್ಳು, ನೃತ್ಯಗಳೊಂದಿಗೆ, ಮಳೆಯಲ್ಲಿಯೂ ಉತ್ಸಾಹದಿಂದ ಜಿಲ್ಲಾದ್ಯಂತ ಬೃಹತ್ ಸಂಖ್ಯೆಯಲ್ಲಿ ಆಗಮಿಸಿದ ಅರಣ್ಯ ಅತಿಕ್ರಮಣದಾರರ ಸಮ್ಮುಖದಲ್ಲಿ
ಹೋರಾಟಗಾರರ ಪ್ರಮುಖರು “ಉರುಳು ಸೇವೆ” ಮಾಡುವ ಮೂಲಕ ವಿಶೇಷ ರೀತಿಯಲ್ಲಿ ಇಂದು ಅರಣ್ಯ ಭೂಮಿ ಹಕ್ಕಿಗಾಗಿ ಹಕ್ಕೊತ್ತಾಯಿಸಲಾಯಿತು.
ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ನೇತ್ರತ್ವದಲ್ಲಿ ಇಂದು ಶಿರಸಿ ಮಾರಿಕಾಂಬ ದೇವಾಲಯದ ಎದುರು ಉರುಳು ಸೇವೆ ಮಾಡುವ ಸಂದರ್ಭದಲ್ಲಿ ಹೋರಾಟದ ಬಾವುಟ, ಹಕ್ಕಿಗಾಗಿ ಒತ್ತಾಯದ ಘೋಷಣೆ ಮೂಲಕ ವಿಭಿನ್ನ ರೀತಿಯ ಹೋರಾಟಕ್ಕೆ ಚಾಲನೆ ನೀಡಿರುವುದು ವಿಶೇಷವಾಗಿತ್ತು.
ವಿವಿಧ ತಾಲೂಕಿನ ಪ್ರಮುಖರಾದ ಶಿವಾನಂದ ಜೋಗಿ ಮುಂಡಗೋಡ, ಮಾರುತಿ ನಾಯ್ಕ ಮತ್ತಿಘಟ್ಟ, ಮಹೇಶ ನಾಯ್ಕ ಶಿವಳಮನೆ, ಲಕ್ಷö್ಮಣ ಮಾಳ್ಳಕ್ಕನವರ, ಎಮ್ ಪಿ ಗೌಡ ಹುಕ್ಕಳಿ, ಕಿರಣ ಮರಾಠಿ ದೇವನಳ್ಳಿ, ಶಾಂತಪ್ಪ ಮಡಲೂರು ಶಿರಸಿ, ಉಮೇಶ ನಾಯ್ಕ ಶೆಲೂರು, ರಾಮು ಗೌಡ ದನಗನಹಳ್ಳಿ ಮುಂತಾದವರು ಉರುಳು ಸೇವೆಯಲ್ಲಿ ಪಾಲ್ಗೊಂಡಿದ್ದರು
More Stories
ಮೇಸ್ತಾ ಪ್ರಕರಣದಲ್ಲಿ ಕಾಗೇರಿಯಿಂದ ಕೀಳುಮಟ್ಟದ ಹೇಳಿಕೆ ನಿರೀಕ್ಷಿಸಿರಲಿಲ್ಲ: ದೇಶಪಾಂಡೆ
ಶೂನ್ಯ ಸಾಧನೆ ಮುಚ್ಚಿಡಲು ಬಿಜೆಪಿಯಿಂದ ಮತ್ತೆ ಮೇಸ್ತಾ ಪ್ರಕರಣ ಮುನ್ನೆಲೆಗೆ: ಭೀಮಣ್ಣ ನಾಯ್ಕ
ಮೇಸ್ತಾ ಪ್ರಕರಣದಲ್ಲಿ ಯುವಕರ ಮೇಲೆ ಮಾತ್ರ ಯಾಕೆ ಕೇಸ್ ದಾಖಲಾಯಿತು, ಕಾಗೇರಿ ಮೇಲೆ ಯಾಕಾಗಿಲ್ಲ? ಡಾ.ಅಂಜಲಿ ಪ್ರಶ್ನೆ