ವರದಿ: ವೇಣುಗೋಪಾಲ ಮದ್ಗುಣಿ
ಶಿರಸಿ : ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ) ಬೆಂಗಳೂರು ಇದರ 2023 ರ ನೂತನ ವರ್ಷದ ಕ್ಯಾಲೆಂಡರ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಕ್ರೀಯಾ ಸಮಿತಿಯ ಅಧ್ಯಕ್ಷರಾದ ವೇಣುಗೋಪಾಲ ಮದ್ಗುಣಿ ಮಾತನಾಡಿ ಈ ವರ್ಷ ಸಂಘ ಶತಮಾನೋತ್ಸವ ಆಚರಿಸುತ್ತಿದ್ದು, ಈ ಕುರಿತು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಚರಿಸುತ್ತಿದ್ದು ಹಿರಿಯ ಗುತ್ತಿಗೆದಾರರಿಗೆ ಸನ್ಮಾನ್ಯ ಹಾಗೂ ಗುತ್ತಿಗೆದಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದೆ. ರಾಜ್ಯದ 30 ಜಿಲ್ಲೆ ಹಾಗೂ ಬೆಂಗಳೂರಿನ 35 ಉಪಸಮಿತಿಯಲ್ಲಿ ದಿನಾಂಕ 30-12-2022 ರ ಶುಕ್ರವಾರ ಬೆಂಗಳೂರಿನ ಕೇಂದ್ರ ಸಮಿತಿಯಲ್ಲಿ ಹಾಗೂ ಜಿಲ್ಲಾ ಕೇಂದ್ರದಲ್ಲಿ ಬಿಡುಗಡೆಗೊಳಿಸಲಾಯಿತೆಂದರು. ಅದರಂತೆ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರರ ಸಂಘ ಉತ್ತರ ಕನ್ನಡ ಜಿಲ್ಲೆ ಸಮಿತಿಯವತಿಯಿಂದ ಶಿರಸಿಯಲ್ಲಿ ಬಿಡುಗಡೆಗೊಳಿಸಲಾಯಿತು.
ಕೇಂದ್ರ ಸಮಿತಿಯ ಸದಸ್ಯರಾದ ಸಿದ್ದಾರ್ಥ ನಾಯ್ಕ, ಶತಮಾನೋತ್ಸವ ಸಮಿತಿಯ ವೈಸ್ ಚೆರಮೇನ್ ಪ್ರದೀಪ ನಾಯ್ಕ, ಡೈರಿ ಸಮಿತಿಯ ಜೇಮ್ಸ್ ರೋಡ್ರೀಗ್ರಸ್, ಉತ್ತರ
ಕನ್ನಡ ಜಿಲ್ಲಾಧ್ಯಕ್ಷ ಮೋಹನ ಮಡಿವಾಳ, ಮಂಜುನಾಥ ಹರಿಜನ, ಅನೂಪ ನೇತ್ರೇಕರ, ಜಿ.ಎನ್. ಹೆಗಡೆ, ಮಹೇಶ ನಾಯ್ಕ, ಪ್ರಶಾಂತ ನಾಯ್ಕ, ಯೋಗೇಶ ಗೌಡ, ವಿವೇಕ ಭಟ್ ಮುಂತಾದವರಿದ್ದರು.
More Stories
ಮೇಸ್ತಾ ಪ್ರಕರಣದಲ್ಲಿ ಕಾಗೇರಿಯಿಂದ ಕೀಳುಮಟ್ಟದ ಹೇಳಿಕೆ ನಿರೀಕ್ಷಿಸಿರಲಿಲ್ಲ: ದೇಶಪಾಂಡೆ
ಶೂನ್ಯ ಸಾಧನೆ ಮುಚ್ಚಿಡಲು ಬಿಜೆಪಿಯಿಂದ ಮತ್ತೆ ಮೇಸ್ತಾ ಪ್ರಕರಣ ಮುನ್ನೆಲೆಗೆ: ಭೀಮಣ್ಣ ನಾಯ್ಕ
ಮೇಸ್ತಾ ಪ್ರಕರಣದಲ್ಲಿ ಯುವಕರ ಮೇಲೆ ಮಾತ್ರ ಯಾಕೆ ಕೇಸ್ ದಾಖಲಾಯಿತು, ಕಾಗೇರಿ ಮೇಲೆ ಯಾಕಾಗಿಲ್ಲ? ಡಾ.ಅಂಜಲಿ ಪ್ರಶ್ನೆ