ಶಿರಸಿ: ಇಲ್ಲಿನ ಶಬರ ಸಂಸ್ಥೆಯು ಹುಳಗೋಳ ಸೇವಾ ಸಹಕಾರಿ ಸಂಘದ ಸಹಕಾರದಲ್ಲಿ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಪಾರ್ಥ ಸಾರಥ್ಯ ತಾಳಮದ್ದಲೆ ಫೆ.24ರ ಸಂಜೆ 6ರಿಂದ ಭೈರುಂಬೆ ಸೊಸೈಟಿಯಲ್ಲಿ ನಡೆಯಲಿದೆ.
ಭಾಗವತರಾಗಿ ಕೃಷ್ಣ ಹೆಗಡೆ ಕನೇನಳ್ಳಿ, ಮದ್ದಲೆಯಲ್ಲಿ ನರಸಿಂಗಹ ಭಟ್ಟ ಹಂಡ್ರಮನೆ ಸಹಕಾರ ನೀಡಲಿದ್ದು, ಅರ್ಥಧಾರಿಗಳಾಗಿ ವಿದ್ಯಾವಾಚಸ್ಪತಿ ಉಮಾಕಾಂತ ಭಟ್ಟ ಕೆರೇಕೈ, ಅಶೋಕ ಭಟ್ಟ ಉಜಿರೆ, ಎಂ.ಎನ್. ಹೆಗಡೆ ಹಲವಳ್ಳಿ ಪಾಲ್ಗೊಳ್ಳುವರು. ಕಾರ್ಯಕ್ರಮಕ್ಕೆ ಗೆಳೆಯರ ಬಳಗ ಭೈರುಂಬೆ, ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಸುರೇಶ ಹಕ್ಕಿಮನೆ ಸಹಕಾರ ನೀಡಲಿದ್ದಾರೆ ಎಂದು ಶಬರ ಸಂಸ್ಥೆ ಕಾರ್ಯದರ್ಶಿ ನಾಗರಾಜ ಜೋಶಿ ಸೋಂದಾ ತಿಳಿಸಿದ್ದಾರೆ.
More Stories
ಮೇಸ್ತಾ ಪ್ರಕರಣದಲ್ಲಿ ಕಾಗೇರಿಯಿಂದ ಕೀಳುಮಟ್ಟದ ಹೇಳಿಕೆ ನಿರೀಕ್ಷಿಸಿರಲಿಲ್ಲ: ದೇಶಪಾಂಡೆ
ಶೂನ್ಯ ಸಾಧನೆ ಮುಚ್ಚಿಡಲು ಬಿಜೆಪಿಯಿಂದ ಮತ್ತೆ ಮೇಸ್ತಾ ಪ್ರಕರಣ ಮುನ್ನೆಲೆಗೆ: ಭೀಮಣ್ಣ ನಾಯ್ಕ
ಮೇಸ್ತಾ ಪ್ರಕರಣದಲ್ಲಿ ಯುವಕರ ಮೇಲೆ ಮಾತ್ರ ಯಾಕೆ ಕೇಸ್ ದಾಖಲಾಯಿತು, ಕಾಗೇರಿ ಮೇಲೆ ಯಾಕಾಗಿಲ್ಲ? ಡಾ.ಅಂಜಲಿ ಪ್ರಶ್ನೆ