ಶಿರಸಿ: ರಾಷ್ಟ್ರದ ಪ್ರಮುಖ ರಂಗ ನಿರ್ದೇಶಕ ಡಾ. ಶ್ರೀಪಾದ ಭಟ್ಟ ಶಿರಸಿ, ಅವರ ರಂಗ ಪಯಣದ ಕಥನ ‘ದಡವ ನೆಕ್ಕಿದ ಹೊಳೆ’ ಕೃತಿಯು ಮೈಸೂರಿನಲ್ಲಿ ಬಿಡುಗಡೆ ಕಂಡಿತು. ಪ್ರತಿಷ್ಠಿತ ಬಹುರೂಪಿ ಪ್ರಕಾಶನ ಹೊರತಂದಿರುವ ಈ ಕೃತಿಯನ್ನು ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ಮಂಡ್ಯ ರಮೇಶ್ ನೇತೃತ್ವದ ನಟನ ರಂಗಶಾಲೆಯಲ್ಲಿ ಖ್ಯಾತ ನಟ ಪ್ರಕಾಶ ರೈ ಬಿಡುಗಡೆ ಮಾಡಿದರು.
ರಂಗಕರ್ಮಿ, ನಟ ಬಿ.ಸುರೇಶ್, ಲೇಖಕಿ ದೀಪಾ ಹಿರೇಗುತ್ತಿ, ಬಹುರೂಪಿಯ ಜಿ.ಎನ್.ಮೋಹನ್ ಇತರರು ಉಪಸ್ಥಿತರಿದ್ದರು. ನಂತರ ನಟನ ರಂಗ ಪಯಣ ರೆಪರ್ಟರಿ ತಂಡದ ಹೊಸ ರಂಗಪ್ರಯೋಗ ‘ಕಣಿವೆಯ ಹಾಡು’ ಎಂಬ ನಾಟಕವು , ಡಾ. ಶ್ರೀಪಾದ ಭಟ್ಟರ ನಿರ್ದೇಶನದಲ್ಲಿ ಪ್ರದರ್ಶನ ಕಂಡಿತು. ನಟನದ ಮೇಘ ಸಮೀರ ಮತ್ತು ದಿಶಾ ರಮೇಶ್ ಅಭಿನಯಿಸಿ ಗಮನ ಸೆಳೆದರು.
More Stories
ಬಜೆಟ್ ನಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಘೋಷಣೆಯಾಗದಿದ್ದಲ್ಲಿ ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ:- ಅನಂತಮೂರ್ತಿ ಹೆಗಡೆ ಆಗ್ರಹ
ಬಿಜೆಪಿ ಕಾರ್ಯಕರ್ತ ಮೊಹಮ್ಮದ್ ಗೌಸ್ ಸಾವಿಗೆ ಆರೋಗ್ಯ ಇಲಾಖೆ ನೇರ ಹೊಣೆ: ಅನಂತಮೂರ್ತಿ ಹೆಗಡೆ
ಕಿತ್ತೂರಿನ ಆಟೋ ರಿಕ್ಷಾ, ಹಾಗೂ ಗೂಡ್ಸ್ ರಿಕ್ಷಾ ಚಾಲಕ ಮತ್ತು ಮಾಲಕರಿಗೆ ಉಚಿತ ಪಾಸಿಂಗ್ ಯೋಜನೆ