May 6, 2024

Bhavana Tv

Its Your Channel

ಸುಫ್ರೀಂ ಕೋರ್ಟನಲ್ಲಿ ಅರಣ್ಯ ಅತಿಕ್ರಮಣದಾರ ವಿಚಾರಣೆ ; ಅಡ್ವೊಕೇಟ್ ಜನರಲ್ ಜೊತೆ ಹೋರಾಟಗಾರ ರವೀಂದ್ರನಾಯ್ಕ ಚರ್ಚೆ.

ಶಿರಸಿ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತೀರಸ್ಕಾರವಾಗಿರುವ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸಬೇಕೆಂದು ಏಂಟು ಪರಿಸರವಾದಿ ಸಂಘಟನೆಗಳು ಸುಫ್ರೀಂ ಕೋರ್ಟನಲ್ಲಿ ದಾಖಲಿಸಿದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ
ವಿಚಾರಣೆಗೆ ಸಂಬ0ಧಿಸಿ ರಾಜ್ಯ ಸರಕಾರ ನಿಲುವು ಹಾಗೂ ಅರಣ್ಯವಾಸಿಗಳ ಕಾನೂನು ಅಂಶಗಳ ಕುರಿತು ನೂತನವಾಗಿ ರಾಜ್ಯ ಸರಕಾರದಿಂದ ನೇಮಕವಾಗಿರುವ ಕೆ.ಶಶಿಕಿರಣ್ ಶೆಟ್ಟಿ ಅಡ್ವೊಕೇಟ್ ಜನರಲ್ ಅವರೊಂದಿಗೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಚರ್ಚಿಸಿದರು.
ಕರ್ನಾಟಕ ಉಚ್ಛ ನ್ಯಾಯಾಲಯದ ಅಡ್ವೊಕೇಟ್ ಜನರಲ್ ಕಚೇರಿಯಲ್ಲಿ ಕರ್ನಾಟಕ ಸರಕಾರದ ಮಾಜಿ ಸಚಿವ ಹಾಗೂ ಹಾಲಿ ಶಾಸಕರಾಗಿರುವ ಆರ್.ವಿ ದೇಶಪಾಂಡೆ ಅವರ ಮಾರ್ಗದರ್ಶನ ಮತ್ತು ಸೂಚನೆ ಮೇರೆಗೆ ಸುಫ್ರೀಂ
ಕೋರ್ಟನಲ್ಲಿ ರಾಜ್ಯ ಸರಕಾರವು ಅರಣ್ಯವಾಸಿಗಳ ಪರವಾಗಿ ಪೂರಕವಾದ ಅಂಶಗಳ ಕುರಿತು ಚರ್ಚಿಸಲು ಇಂದು ಅವರನ್ನು ರವೀಂದ್ರ ನಾಯ್ಕ ಭೆಟ್ಟಿಯಾದರು.
ಸುಫ್ರೀಂ ಕೋರ್ಟನಲ್ಲಿ ವೈಲ್ಡ ಲೈಫ್ ಫಸ್ಟ ಹಾಗೂ ಇನ್ನೀತರ ಏಳು ಪರಿಸರವಾದಿ ಸಂಸ್ಥೆಗಳು ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತೀರಸ್ಕಾರವಾದ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸಿ, ಅತಿಕ್ರಮಣದಾರರ ಕ್ಷೇತ್ರದಲ್ಲಿ ಅರಣ್ಯೀಕರಣ ಮಾಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಈಗಾಗಲೇ ರಾಜ್ಯ ಸರಕಾರ ಮಂಜೂರಿ ಅರ್ಜಿ ತೀರಸ್ಕಾರವಾಗಿರುವ ಅತಿಕ್ರಮಣದಾರರನ್ನ ಹಂತ ಹಂತವಾಗಿ ಒಕ್ಕಲೆಬ್ಬಿಸುವುದಾಗಿ ಸುಫ್ರೀಂ ಕೋರ್ಟನಲ್ಲಿ ಪ್ರಮಾಣ ಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಅಂತಿಮ ವಿಚಾರಣೆ ಪೂರ್ವದಲ್ಲಿ ಅರಣ್ಯವಾಸಿಗಳ ಪರವಾಗಿ ಮಹತ್ವವಾದ ಕಾನೂನು ಅಂಶಗಳ ಕುರಿತು ರವೀಂದ್ರ ನಾಯ್ಕ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿದರು.
ಕೇಂದ್ರಸರಕಾರದ ನಿಲುವು:
ಸುಫ್ರೀಂ ಕೋರ್ಟನಲ್ಲಿ ಅರಣ್ಯವಾಸಿಗಳ ಪರವಾಗಿ ಕೇಂದ್ರ ಸರಕಾರವು ಸ್ಪಷ್ಟ ನಿಲುವನ್ನು ಪ್ರಕಟಿಸುವುದು ಹಾಗೂ ಅರಣ್ಯವಾಸಿಗಳ ಪರವಾಗಿ ಸುಫ್ರೀಂ ಕೋರ್ಟನಲ್ಲಿ ಪ್ರಮಾಣ ಪತ್ರ ಸಲ್ಲಿಸುವುದು ಅವಶ್ಯವೆಂದು ಅಧ್ಯಕ್ಷ ರವೀಂದ್ರ
ನಾಯ್ಕ ಪ್ರಕಟಣೆಯಲ್ಲಿತಿಳಿಸಿದ್ದಾರೆ.

error: