
ಶಿರಸಿ: ಮಕ್ಕಳಿಗೆ ವಿಜ್ಞಾನ ವಿಷಯ ಭೋದಿಸುವ ಜೊತೆಗೆ ಕ್ರಿಯಾಶೀಲವಾಗಿ ವಿಜ್ಞಾನ ಕಲಿಕಾಂಶಗಳ ಪ್ರಯೋಗ, ವಿಜ್ಞಾನ ನಾಟಕ, ವಿಜ್ಞಾನ ವಿಚಾರ ಗೋಷ್ಠಿ, ವಿಜ್ಞಾನ ವಸ್ತು ಪ್ರದರ್ಶನ ಮತ್ತು ಪಾತ್ರಭಿನಯ ಸ್ಪರ್ಧೆಗಳಲ್ಲಿ ರಾಜ್ಯ ಮತ್ತು ದಕ್ಷಿಣ ಭಾರತ ಮಟ್ಟದಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವುದರ ಮೂಲಕ ಗುರುತಿಸಿಕೊಂಡ ಜಯಲಕ್ಷ್ಮೀ ಗುನಗಾ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಅರಸಿ ಬಂದಿದೆ.
ಇಲ್ಲಿನ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕಿಯಾದ ಜಯಲಕ್ಷ್ಮೀ ಅವರು ಹದಿನೈದು ವರ್ಷಗಳಿಗೂ ಅಧಿಕ ಕಾಲ ಬಂಡಲ ಸೇರಿದಂತೆ ಹಲವಡೆ ಗ್ರಾಮೀಣ ಸೇವೆ ಸಲ್ಲಿಸಿದ್ದರು.
ಅವರು ರಾಷ್ಟ್ರ ಮಟ್ಟದಲ್ಲಿ ಪ್ರದರ್ಶಿತ ಗೊಂಡ ವಿಜ್ಞಾನ ನಾಟಕದ ಇಂಗ್ಲಿಷ್ ಭಾಷಾಂತರಕ್ಕೆ ದಕ್ಷಿಣ ಭಾರತ ಮಟ್ಟದಲ್ಲಿ ಅತ್ಯುತ್ತಮ ಸ್ಕ್ರಿಪ್ಟ್ ರೈಟರ್ ಪ್ರಶಸ್ತಿ ಗಳಿಸಿದ್ದರು. ಶಿಕ್ಷಣ ಇಲಾಖೆಯ ವಿವಿಧ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು, ವಿಜ್ಞಾನ ವಿಷಯದ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಮೂಲತಃ ಕುಮಟಾ ಮಣಕಿ ಗ್ರಾಮದವರಾದ ಇವರು ಕೆಯುಡಿಯಲ್ಲಿ ಎಂಎಸ್ ಸಿ ಎಂಎಡ್ ನಲ್ಲಿ ಎರಡನೇ ರ್ಯಾಂಕ್ ಪಡೆದು ಕೊಂಡಿದ್ದರು.
ಕೆಡಿಸಿಸಿ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ದತ್ತಾತ್ರೇಯ ಗುನಗಾ ಮತ್ತು ಸುನಂದಾ ಗುನಗಾ ಇವರ ಮಗಳು. ಇವರ ಪತಿ ಶಾಂತಾರಾಮ ಗುನಗಾ ಇಸಳೂರು ಪ್ರೌಢ ಶಾಲೆಯ ಶಿಕ್ಷಕರಾಗಿದ್ದಾರೆ.
ಪ್ರಶಸ್ತಿ ಬಂದದ್ದು ಖುಷಿ ಕೊಟ್ಟಿದೆ. ಇದು ನನ್ನೆಲ್ಲ ವಿಜ್ಞಾನ ಬಳಗಕ್ಕೆ ಸಂದ ಪ್ರಶಸ್ತಿ ಎಂದೇ ಭಾವಿಸಿದ್ದೇನೆ. ಪ್ರಶಸ್ತಿ ನನ್ನ ಜವಬ್ದಾರಿಯನ್ನು ದ್ವಿಗುಣಗೊಳಿಸಿದೆ ಎಂದೂ ಪ್ರತಿಕ್ರಿಯೆ ನೀಡಿದ್ದಾರೆ.
More Stories
ಪ್ರಕೃತಿ ವಿಸ್ಮಯ : ಅಪರೂಪದ ಅವಳಿ ಬೆಕ್ಕಿನ ಮರಿಗಳು.
ಮೇಸ್ತಾ ಪ್ರಕರಣದಲ್ಲಿ ಕಾಗೇರಿಯಿಂದ ಕೀಳುಮಟ್ಟದ ಹೇಳಿಕೆ ನಿರೀಕ್ಷಿಸಿರಲಿಲ್ಲ: ದೇಶಪಾಂಡೆ
ಶೂನ್ಯ ಸಾಧನೆ ಮುಚ್ಚಿಡಲು ಬಿಜೆಪಿಯಿಂದ ಮತ್ತೆ ಮೇಸ್ತಾ ಪ್ರಕರಣ ಮುನ್ನೆಲೆಗೆ: ಭೀಮಣ್ಣ ನಾಯ್ಕ