ಪರೇಶ್ ಮೆಸ್ತಾ ಸಾವಿನ ಪ್ರಕರಣವನ್ನು ಮುಂದಿಟ್ಟುಕೊAಡು ನಮ್ಮ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪತಿ ರಾಜ್ಯದ ಪೊಲೀಸ್ ವ್ಯವಸ್ಥೆಯಲ್ಲಿ ಉನ್ನತ ಹುದ್ದೆಯಲ್ಲಿರುವವರ ಹೆಸರನ್ನು ಮುನ್ನೆಲೆಗೆ ತಂದು ಹಾಳು ಮಾಡಲು ಹೊರಟಿರುವ ಬಿಜೆಪಿ ಅಭ್ಯರ್ಥಿ ಕಾಗೇರಿ ಚುನಾವಣೆ ಗೆಲ್ಲಲು ಅತೀ ಕೆಳ ಮಟ್ಟದ ರಾಜಕಾರಣ ಮಾಡುತ್ತಿದ್ದು,ಅದು ಅವರಿಗೆ ಶೋಭೆ ತರುವುದಿಲ್ಲ, ಅವರಿಗೆ ದೈರ್ಯವಿದ್ದರೆ ಯಾವ ವೇದಿಕೆಯಲ್ಲಾದರು ಸರಿ ನಾನು ಚರ್ಚೆಗೆ ಸಿದ್ದನಿದ್ದೇನೆ, ಮುಖದಲ್ಲಿ ನಗುವಿರದ,ಮಾತನಾಡದ, ಅಭಿವೃದ್ಧಿ ಮಾಡದ ಕಾಗೇರಿ ಇಂದು ಕೀಳುಮಟ್ಟದ ರಾಜಕಾರಣಮಾಡಲು ಹೊರಟಿದ್ದಾರೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಕಿಡಿಕಾರಿದ್ದಾರೆ.
‘ಪರೇಶ್ ಮೇಸ್ತಾ ಪ್ರಕರಣದಲ್ಲಿ ಐಜಿಪಿ ಹೇಮಂತ್ ನಿಂಬಾಳ್ಕರ್ ಹಸ್ತಕ್ಷೇಪ’ ಎಂಬ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆಗೆ ಹುಲೇಕಲ್ ಜಿ.ಪಂ. ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಪ್ರತಿಕ್ರಿಯಿಸಿದ ಅವರು, ನಾನು ಜಿಲ್ಲಾ ಉಸ್ತುವಾರಿ ಇದ್ದ ಸಂದರ್ಭದಲ್ಲಿ ಪರೇಶ್ ಮೇಸ್ತಾ ಪ್ರಕರಣ ನಡೆದಿತ್ತು. ಆದರೆ ಅದು ಸಹಜ ಸಾವಲ್ಲ, ಕೊಲೆ ಎಂದು ಎಂದು ಬಿಜೆಪಿಗರು ಗಲಾಟೆ ಮಾಡಿದರು. ಸ್ಥಳಕ್ಕೆ ನಾನೂ ಭೇಟಿ ನೀಡಿದ್ದೆ, ಇಡೀ ರಾತ್ರಿ ಸಭೆ ಮಾಡಿದ್ದೆ. ಕೆಲವರು ಕಾನೂನು ಸುವ್ಯವಸ್ಥೆ ಕೈಗೆ ತೆಗೆದುಕೊಂಡರು. ಪೊಲೀಸರು ಕರ್ತವ್ಯ ನಿಭಾಯಿಸಿದರು. ಅಂದಿನ ಐಜಿ ಕೂಡ ಹೊನ್ನಾವರಕ್ಕೆ ಬಂದಿದ್ದರು. ಅವರ ಕಾರಿಗೆ ಬೆಂಕಿ ಹಚ್ಚಿದರು. ಸುದೈವಶಾತ್ ಐಜಿ ಅಪಾಯದಿಂದ ಪಾರಾದರು ಎಂದು ವಿವರಿಸಿದರು.
ಬಿಜೆಪಿಗರ ಒತ್ತಾಯದ ಮೇರೆಗೆ ಕಾಗೇರಿಯವರ ಪಕ್ಷದ ಅಧೀನದಲ್ಲಿರುವ ಸಿಬಿಐಗೆ ಪ್ರಕರಣ ಹಸ್ತಾಂತರಿಸಿದಾಗ ‘ಇದು ಸಹಜ ಸಾವು, ಕೊಲೆಯಲ್ಲ’ ಎಂದು ವರದಿ ನೀಡಿದರು. ಆ ವರದಿ ಬಂದು ಎಷ್ಟೋ ವರ್ಷವಾಗಿದೆ. ಆದರೆ ಇಷ್ಟು ವರ್ಷ ಮಲಗಿದ್ದ ಕಾಗೇರಿ ಈಗ ಯಾಕೆ ಎದ್ದರು? ಜವಾಬ್ದಾರಿ ಸ್ಥಾನದಲ್ಲಿರುವ, ಹಿರಿಯ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಇದು ಶೋಭೆ ತರುವುದಿಲ್ಲ. ಅವರಿಂದ ಇಂಥ ಕೀಳು ಮಟ್ಟದ ಹೇಳಿಕೆ ಅಪೇಕ್ಷಿಸಿರಲಿಲ್ಲ ಎಂದು ಬೇಸರಿಸಿದರು.
ಈ ಪ್ರಕರಣದ ಕುರಿತು ಅವರು ಕರೆದ ವೇದಿಕೆಗೆ ನಾನು ಚರ್ಚೆಗೆ ಬರಲು ಸಿದ್ಧ. ಕಾಗೇರಿ ಹೇಳಕೆಯಿಂದ ಮನಸ್ಸಿಗೆ ನೋವಾಗಿದೆ. ಆತ ಮೊದಲೇ ಮಾತನಾಡುವುದಿಲ್ಲ, ಅಭಿವೃದ್ಧಿ ಮಾಡಿಯೂ ಗೊತ್ತಿಲ್ಲ. ಆದರೆ ಇಂಥ ಹೇಳಿಕೆಯಿಂದ ಮತ ಬರುತ್ತದೆಂದು ಅಂದುಕೊAಡಿದ್ದರೆ ಅದು ಮೂರ್ಖತನ. ಮತದಾರರು ಜಾಣರಿದ್ದಾರೆ. ಇದರಿಂದ ಬಿಜೆಪಿ ಮತ ಕಡಿಮೆಯಾಗಬಹುದು ವಿನಾ ಹೆಚ್ಚಾಗಲ್ಲ. ಒಬ್ಬ ಜನಪ್ರತಿನಿಧಿಯಾಗುವ ವ್ಯಕ್ತಿಯಿಂದ ಇದನ್ನ ನಿರೀಕ್ಷಿಸಿರಲಿಲ್ಲ ಎಂದರು.
More Stories
ಶೂನ್ಯ ಸಾಧನೆ ಮುಚ್ಚಿಡಲು ಬಿಜೆಪಿಯಿಂದ ಮತ್ತೆ ಮೇಸ್ತಾ ಪ್ರಕರಣ ಮುನ್ನೆಲೆಗೆ: ಭೀಮಣ್ಣ ನಾಯ್ಕ
ಮೇಸ್ತಾ ಪ್ರಕರಣದಲ್ಲಿ ಯುವಕರ ಮೇಲೆ ಮಾತ್ರ ಯಾಕೆ ಕೇಸ್ ದಾಖಲಾಯಿತು, ಕಾಗೇರಿ ಮೇಲೆ ಯಾಕಾಗಿಲ್ಲ? ಡಾ.ಅಂಜಲಿ ಪ್ರಶ್ನೆ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಶಿರಸಿ ಕಾರ್ಯಕಾರಿಣಿ ಸಭೆ