May 22, 2024

Bhavana Tv

Its Your Channel

ಯಲ್ಲಾಪುರ ತಾಲೂಕಿನ ಹುಣಶೆಟ್ಟಿಕೊಪ್ಪದಲ್ಲಿ “ಹೆಬ್ಬಾರ ರೇಶನ ಕಿಟ” ವಿತರಣೆ

ಯಲ್ಲಾಪುರ : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ ಅವರು ತಾಲೂಕಿನ ಕಿರವತ್ತಿ ಹಾಗೂ ಹುಣಶೇಟ್ಟಿಕೊಪ್ಪ ಗ್ರಾಮದಲ್ಲಿ” ಹೆಬ್ಬಾರ ರೇಷನ್ ಕಿಟ್ ” ವಿತರಣಾ ಕಾರ್ಯಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.


ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ತೆಂಗಿನಕಾಯಿ ಅವರು ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಚಿವರ ಜನಪರ ಕಾರ್ಯವನ್ನು ಮೆಚ್ಚಿ ಶ್ಲಾಘನೆಯನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ವೆಂಕಟೇಶ ನಾಯಕ, ಜಿಲ್ಲಾಪ್ರಧಾನ ಕಾರ್ಯದರ್ಶಿಗಳಾದ, ಗೋವಿಂದ ನಾಯ್ಕ ಹಾಗೂ ಯುವ ನಾಯಕರಾದ ವಿವೇಕ್ ಹೆಬ್ಬಾರ, ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಗಾಂವ್ಕರ, ಪ್ರಮುಖರಾದ ವಿಜಯ ಮಿರಾಶಿ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ:- ವೇಣುಗೋಪಾಲ ಮದ್ಗುಣಿ, ಯಲ್ಲಾಪುರ

error: