ಯಲ್ಲಾಪುರ : ಉತ್ತರ ಕನ್ನಡ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಯಲ್ಲಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ತಾಲೂಕು ಪಂಚಾಯತ ಸಭಾಭವನದಲ್ಲಿ ಜಲ ಜೀವನ್ ಮಿಷನ್ ಕಾಮಗಾರಿ ಮಾಹಿತಿ ಕಾರ್ಯಾಗಾರ ನಡೆಯಿತು.
ಕಾಮಗಾರಿ ಕುರಿತ ಮಾಹಿತಿಯನ್ನು ವೀಡಿಯೋ ಪರದೆ ಮೂಲಕ ಜಲ ಜೀವನ ಮಿಶನ್ ಯೋಜನೆಯ ಅಧಿಕಾರಿಗಳು ವಿಸ್ತೃತವಾಗಿ ಸಭೆಗೆ ವಿವರಿಸಿದರು. ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಗ್ರಾಮ ಪಂಚಾಯತದ ಅಧ್ಯಕ್ಷರು ಹಾಗೂ ಸದಸ್ಯರು ಪ್ರಸ್ತುತ ಸಮಸ್ಯೆಗಳು, ಮುಂದೆ ಒದಗಿ ಬರಬಹುದಾದ ಪರಿಣಾಮಗಳ ಕುರಿತು ಚರ್ಚಿಸಿದರು. ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಯ ಲೋಪದೋಷಗಳನ್ನು ಹಂಚಿಕೊAಡರು.ತಾಲೂಕಾ ಪಂಚಾಯತ ಆಡಳಿತಾಧಿಕಾರಿ ನಟರಾಜ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ, ಮುಂಡಗೋಡಿನ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ ಕಟ್ಟಿ, ಪಂಚಾಯತ ರಾಜ ಇಂಜಿನಿಯರಿAಗ ಉಪವಿಭಾಗ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರುಗಳಾದ ಯಲ್ಲಾಪುರ ವಿಭಾಗದ ಅಶೋಕ ಬಂಟ, ಮುಂಡಗೋಡು ವಿಭಾಗದ ರಾಜೇಶ್ವರಿ ಕದಂ ಕಾರ್ಯಕ್ರಮದ ವೇದಿಕೆಯಲ್ಲಿದ್ದರು.
ಈ ಸಂದರ್ಭದಲ್ಲಿ ಕಾರವಾರ ಜಿಲ್ಲಾ ಪಂಚಾಯತ ಡಿಪಿಎಂ ವೆಂಕಟೇಶ ನಾಯ್ಕ, ಯಲ್ಲಾಪುರ ಮತ್ತು ಮುಂಡಗೋಡು ತಾಲೂಕಿನ ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಸದಸ್ಯರು, ಪಿಡಿಒಗಳು, ಜೆಜೆಎಂ ಕಾಮಗಾರಿಯ ಗುತ್ತಿಗೆದಾರರು, ಇಲಾಖೆಯ ಸಿಬ್ಬಂದಿ ವರ್ಗ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ವರದಿ:- ವೇಣುಗೋಪಾಲ ಮದ್ಗುಣಿ.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ