ಯಲ್ಲಾಪುರ : ಯಲ್ಲಾಪುರ ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಡಯಾಲಿಸಿಸ್ ಕೇಂದ್ರವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು.
ಯುವ ನಾಯಕರಾದ ವಿವೇಕ್ ಹೆಬ್ಬಾರ್ ಅವರು ತಮ್ಮ ಸಂಸ್ಥೆಯ ಮೂಲಕವಾಗಿ ಸುಮಾರು ೨೫ ಲಕ್ಷ ರೂಪಾಯಿ ವೆಚ್ಚದಲ್ಲಿ ಆರ್.ಓ.ಪ್ಲಾಂಟ್ ಹಾಗೂ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ವೈದ್ಯಕೀಯ ಪರಿಕರಗಳು ಹೊಂದಿರುವ ಸುಸಜ್ಜಿತ ಡಯಾಲಿಸಿಸ್ ಘಟಕವನ್ನು ಯಲ್ಲಾಪುರದ ಸರಕಾರಿ ಆಸ್ಪತ್ರೆಯಲ್ಲಿ ನಿರ್ಮಾಣ ಮಾಡಿದ್ದು, ಮಾನ್ಯ ಮುಖ್ಯಮಂತ್ರಿಗಳ ಮೂಲಕವಾಗಿ ಡಯಾಲಿಸಿಸ್ ಘಟಕವನ್ನು ಸರಕಾರಕ್ಕೆ ಹಸ್ತಾಂತರಿಸಿದ ಬಗ್ಗೆ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಹಾಗೂ ಯುವ ನಾಯಕರಾದ ವಿವೇಕ್ ಹೆಬ್ಬಾರ್ ಅವರು ಹರ್ಷವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಶಿವರಾಮ ಹೆಬ್ಬಾರ್, ವಿಧಾನಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿ, ವಾಯುವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ವಿ.ಎಸ್. ಪಾಟೀಲ್ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ:- ವೇಣುಗೋಪಾಲ ಮದ್ಗುಣಿ
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ