May 3, 2024

Bhavana Tv

Its Your Channel

ಶಿವರಾಮ ಹೆಬ್ಬಾರ ಸಚಿವರಾಗಿದ್ದಕ್ಕೆ ಅವರ ಅಭಿಮಾನಿಗಳಿಂದ ಸಂಭ್ರಮಾಚರಣೆ

ಯಲ್ಲಾಪುರ : ಶಾಸಕ ಶಿವರಾಮ ಹೆಬ್ಬಾರವರು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಮಂತ್ರಿ ಮಂಡಳದಲ್ಲಿ ಸಚಿವರಾಗಿ ಆಯ್ಕೆಯಾಗಿ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಯಲ್ಲಾಪುರ ಮಂಡಳದ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು. ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿಯಲ್ಲಿ ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್. ಗಾಂವ್ಕರವರ ನೇತೃತ್ವದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಿಸಿದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್ ಗಾಂವ್ಕರ, ಮಂಡಳ ಪ್ರಧಾನ ಕಾರ್ಯದರ್ಶಿ ಡಾ. ರವಿ ಭಟ್ ಬರಗದ್ದೆ, ಯುವಮೋರ್ಚಾ ಅಧ್ಯಕ್ಷರಾದ ಶ್ರೀ ಪ್ರದೀಪ್ ಯಲ್ಲಾಪುರಕರ್, ಪಟ್ಟಣ ಪಂಚಾಯತ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಅಮಿತ ಅಂಗಡಿ,ಪ.ಪA ಸದಸ್ಯರಾದ ಸೋಮೇಶ್ವರ ನಾಯ್ಕ, ನಾಗರಾಜ ಅಂಕೋಲೆಕರ ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಅಭಿಮಾನಿಗಳು ಹಾಜರಿದ್ದರು.

error: