May 3, 2024

Bhavana Tv

Its Your Channel

ವಿಶ್ವದರ್ಶನ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ

ಯಲ್ಲಾಪುರ: ನಿಷ್ಠೆಯಿಂದ ಕೆಲಸ ಮಾಡಿದವರಿಗೆ ಗೆಲುವು ಖಚಿತ ಎಂದು ಉಪನ್ಯಾಸಕಿ ಮುಕ್ತಾ ಶಂಕರ ಹೇಳಿದರು. ಅವರು ತಾಲೂಕಿನ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಬೆಳಕಿನಂದ ಸಾಂಸ್ಕೃತಿಕ ವೇದಿಕೆ ಆಯೋಜನೆಯಲ್ಲಿ ನಡೆದ “ಅಂತಾರಾಷ್ಟ್ರೀಯ ಯುವ ದಿನಾಚರಣೆ” ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು. ಯಾವುದೇ ಕಾರ್ಯವನ್ನು ಮಾಡುವಾಗ ಆ ಕೆಲಸದ ಬಗ್ಗೆ ಭಕ್ತಿ ಇರಬೇಕು. ಶೃದ್ದೆ ಹಾಗೂ ಪ್ರಾಮಾಣಿಕತೆಯಿಂದ ಮಾಡುವ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ. ಪ್ರತಿ ಕೆಲಸವೂ ದೇವರ ಕೆಲಸ ಎಂದು ತಿಳಿದು ಪ್ರಾಮಾಣಿಕವಾಗಿ ಮಾಡಬೇಕು ಎಂದರು. ಕಾರ್ಯಕ್ರಮ ಉದ್ಘಾಟಿಸಿದ ಶೇಖರ ಬೆಳಾಲ ಮಾತನಾಡಿ, ಕಷ್ಟಪಟ್ಟು ಕೆಲಸ ಮಾಡುವವರಿಗೆ ಗೆಲುವು ನಿಶ್ಚಿತ. ಕೆಲಸವನ್ನು ಮಾಡುವುದಕ್ಕಿಂತ ಇಷ್ಟಪಟ್ಟು ಮಾಡುವವರ ಸಂಖ್ಯೆ ಹೆಚ್ಚಾಗಬೇಕು ಎಂದು ಹೇಳಿದರು. ನಿಖಿತಾ ನಾಯ್ಕ ಪ್ರಾರ್ಥಿಸಿದರು. ಖೈರುನ ಶೇಖ ನಿರ್ವಹಿಸಿದರು. ಮಹೇಶ್ ನಾಯ್ಕ ವಂದಿಸಿದರು. ವಿದ್ಯಾರ್ಥಿಗಳು ಹಾಗೂ ಪಾಲಕರು ಆನಲೈನ್ ಮೂಲಕ ಕಾರ್ಯಕ್ರಮ ವೀಕ್ಷಿಸಿದರು..

ವರದಿ: ವೇಣುಗೋಪಾಲ ಮದ್ಗುಣಿ

error: