May 17, 2024

Bhavana Tv

Its Your Channel

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಸಿದ್ದಿ ಮಕ್ಕಳ ವಿಶೇಷ ಕ್ರೀಡಾ ತರಬೇತಿ ಶಿಬಿರಕ್ಕೆ ಬೆಂಗಳೂರಿಗೆ ತೆರಳುವ ಬಸ್‌ಗೆ ಚಾಲನೆ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉತ್ತರಕನ್ನಡ ವತಿಯಿಂದ ಬೆಂಗಳೂರಿನಲ್ಲಿ ” ಸಿದ್ದಿ ಮಕ್ಕಳ ವಿಶೇಷ ಕ್ರೀಡಾ ತರಬೇತಿ ಶಿಬಿರ ” ಅನ್ನು ಆಯೋಜಿಸಲಾಗಿದೆ. ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರವರು ಯಲ್ಲಾಪುರ ಪಟ್ಟಣ ಬಸ್ ನಿಲ್ದಾಣದ ಆವರಣದಲ್ಲಿ ಕ್ರೀಡಾಪಟುಗಳಿಗೆ ಕ್ರೀಡಾ ಸಲಕರಣೆಗಳನ್ನು ನೀಡಿ ಬೆಂಗಳೂರಿಗೆ ತೆರಳುವ ಬಸ್ ಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಶ್ರೀಮತಿ ಗಾಯತ್ರಿ ಹಾಗೂ ಎಸ್.ಟಿ ಮೋರ್ಚಾ ತಾಲೂಕಾಧ್ಯಕ್ಷರಾದ ಶ್ರೀ ರಾಮನಾಥ ಸಿದ್ದಿ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

error: