ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉತ್ತರಕನ್ನಡ ವತಿಯಿಂದ ಬೆಂಗಳೂರಿನಲ್ಲಿ ” ಸಿದ್ದಿ ಮಕ್ಕಳ ವಿಶೇಷ ಕ್ರೀಡಾ ತರಬೇತಿ ಶಿಬಿರ ” ಅನ್ನು ಆಯೋಜಿಸಲಾಗಿದೆ. ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರವರು ಯಲ್ಲಾಪುರ ಪಟ್ಟಣ ಬಸ್ ನಿಲ್ದಾಣದ ಆವರಣದಲ್ಲಿ ಕ್ರೀಡಾಪಟುಗಳಿಗೆ ಕ್ರೀಡಾ ಸಲಕರಣೆಗಳನ್ನು ನೀಡಿ ಬೆಂಗಳೂರಿಗೆ ತೆರಳುವ ಬಸ್ ಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಶ್ರೀಮತಿ ಗಾಯತ್ರಿ ಹಾಗೂ ಎಸ್.ಟಿ ಮೋರ್ಚಾ ತಾಲೂಕಾಧ್ಯಕ್ಷರಾದ ಶ್ರೀ ರಾಮನಾಥ ಸಿದ್ದಿ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ