May 6, 2024

Bhavana Tv

Its Your Channel

ಯಲ್ಲಾಪುರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್ ಗಾಂವ್ಕರ ಅವರ ಮಾರ್ಗದರ್ಶನಲ್ಲಿ ಪಟ್ಟಣ ಗ್ರಾಮದೇವಿ ದೇವಾಲಯಲ್ಲಿ ” ಸೇವೆ ಮತ್ತು ಸಮರ್ಪಣಾ ಅಭಿಯಾನದ ” ೭೧ ದೀಪವನ್ನು ದೇವರಿಗೆ ಅರ್ಪಿಸಿದರು. ಕಾರ್ಯಕ್ರಮದಲ್ಲಿ ವಿವೇಕ ಹೆಬ್ಬಾರ ಅವರು ಭಾಗವಹಿಸಿದರು. ವಿವೇಕ ಹೆಬ್ಬಾರ ಅವರು ಗ್ರಾಮದೇವಿ ದೇವಾಲಯದಲ್ಲಿ ಪಕ್ಷದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ೭೧ ದೀಪಗಳನ್ನು ಬೆಳಗಿಸುವುದರ ಮೂಲಕವಾಗಿ ಜನ್ಮ ದಿನವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಮಂಡಲ ಉಪಾಧ್ಯಕ್ಷರಾದ ಶಿರಿಷ ಪ್ರಭು, ಪ್ರಧಾನ ಕಾರ್ಯದರ್ಶಿ ಪ್ರಸಾದ ಹೆಗಡೆ, ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರುತಿ ಹೆಗಡೆ, ತಾಲೂಕಾ ಪಂಚಾಯತ ಮಾಜಿ ಅಧ್ಯಕ್ಷರಾದ
ಚಂದ್ರಕಲಾ ಭಟ್, ಪಟ್ಟಣ ಪಂಚಾಯತ ಉಪಾಧ್ಯಕ್ಷರಾದ ಶ್ಯಾಮಿಲಿ ಪಾಟಣಕರ ಹಾಗೂ ಪ್ರಮುಖರಾದ ಸುರೇಶ ಶಾನಭಾಗ ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

error: