May 6, 2024

Bhavana Tv

Its Your Channel

ಯಲ್ಲಾಪುರ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಸುಬ್ರಮಣಿ ಜಿ.ಆರ್ ನಿಧನ

ವರದಿ:ವೇಣುಗೋಪಾಲ ಮದ್ಗುಣಿ.
ಯಲ್ಲಾಪುರ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ೧೦ ವರ್ಷಗಳಿಂದ ರಾಜ್ಯಶಾಸ್ತ್ರದ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಬ್ರಮಣಿ ಜಿ.ಆರ್. (೪೭) ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಅ.೪ ರಂದು ಕೊನೆಯುಸಿರೆಳೆದರು.ರಾಜ್ಯಶಾಸ್ತ್ರ ಹಾಗೂ ಭಾರತ ಸಂವಿಧಾನ ವಿಷಯದ ಅಧ್ಯಾಪಕರಾಗಿದ್ದರು. ಮೃತರು ಪತ್ನಿ ಹಾಗೂ ೩ ವರ್ಷದ ಮಗುವನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರ,ವಿಧಾನ ಪರಿಷತ್ತಿನ ಸದಸ್ಯರಾದ ಶಾಂತಾರಾಮ ಸಿದ್ದಿ,ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ವೇಣುಗೋಪಾಲ ಮದ್ಗುಣಿ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷರಾದ ಟಿ.ಶಂಕರ ಭಟ್ಟ,ಕಾಲೇಜು ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗಳು, ಪ್ರಾಂಶುಪಾಲರು ಸಂತಾಪ ವ್ಯಕ್ತಪಡಿಸಿದ್ದಾರೆ.

error: