April 19, 2024

Bhavana Tv

Its Your Channel

ಕೋಟೆಮನೆ ಶ್ರೀ ಸಿದ್ದಿ ವಿನಾಯಕ ದೇವಸ್ಥಾನದ ಮೇಲೆ ಮರ ಬಿದ್ದು ಹಾನಿ

ಉಮಚಗಿ:- ಯಲ್ಲಾಪುರ ತಾಲೂಕಿನಲ್ಲಿ ಸುರಿದ ಮಳೆ ಮತ್ತು ಗಾಳಿಯಿಂದಾಗಿ ಉಮ್ಮಚ್ಗಿ ಪಂಚಾಯತ ವ್ಯಾಪ್ತಿಯ ಕೋಟೆಮನೆಯ ಶ್ರೀ ಸಿದ್ದಿ ವಿನಾಯಕ ದೇವಸ್ಥಾನದ ಮೇಲೆ ತೆಂಗಿನ ಮರ ಮುರಿದು ಬಿದ್ದು ಹಾನಿಯಾದ ಘಟನೆ ಸಂಭವಿಸಿರುತ್ತದೆ. ಮುನ್ನೂರು ವರುಷದ ಇತಿಹಾಸ ಇರುವ ಶ್ರೀ ಸಿದ್ದಿ ವಿನಾಯಕ ದೇವಸ್ಥಾನದ ಹಂಚು ಮತ್ತು ಫಕಾಸಿ, ರೀಪುಗಳಿಗೆ ಹಾನಿಯಾಗಿದ್ದು, ಗೋಡೆ ಬಿರುಕು ಬಿಟ್ಟಿದ್ದು ಯಾವುದೇ ಸಮಯದಲ್ಲಿ ಬಿಳುವ ಸ್ಥಿತಿಯಲ್ಲಿದೆ.
ಘಟನಾ ಸ್ಥಳಕ್ಕೆ ಸ್ಥಳೀಯ ಗ್ರಾಮ ಪಂಚಾಯತ ಸದಸ್ಯರಾದ ಗ.ರಾ. ಭಟ್ಟ ಭೇಟಿ ನೀಡಿ ಪರಿಸೀಲಿಸಿದ್ದು, ಹಾನಿಯ ಪ್ರಮಾಣದ ಪಂಚನಾಮೆ ಮಾಡಿ ಕೂಡಲೇ ಪರಿಹಾರ ನೀಡಲು ತಹಶೀಲ್ದಾರರನ್ನು ಆಗ್ರಹಿಸಿದ್ದಾರೆ.

ವರದಿ:ವೇಣುಗೋಪಾಲ ಮದ್ಗುಣಿ, ಯಲ್ಲಾಪುರ

error: