
ವರದಿ:- ವೇಣುಗೋಪಾಲ ಮದ್ಗುಣಿ
ಯಲ್ಲಾಪುರ: ಉತ್ತರಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಮತಕ್ಷೇತ್ರದ ವಿಧಾನಪರಿಷತ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ ಅವರು ಪಕ್ಷದ ಕಾರ್ಯಾಲಯದಿಂದ ಪಟ್ಟಣ ಪಂಚಾಯತ ಸದಸ್ಯರೊಂದಿಗೆ ತೆರಳಿ, ಪಟ್ಟಣ ಪಂಚಾಯತ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ನಮ್ಮ ಅಭ್ಯರ್ಥಿ ಗಣಪತಿ ಉಳೇಕರ ಅವರು ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಜಯಗಳಿಸುವುದರ ಮೂಲಕವಾಗಿ ಉತ್ತರಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಹೊಸ ಮೈಲಿಗಳನ್ನು ಸೃಷ್ಟಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷ ಸುನಂದಾ ದಾಸ, ಉಪಾಧ್ಯಕ್ಷ ಶಾಮಲಿ ಪಾಟನಕರ, ಸ್ಥಾಯಿ ಸಮಿತಿ ಅಧ್ಯಕ್ಷ ಅಮಿತ ಅಂಗಡಿ, ಪ್ರಮುಖರಾದ ವಿಜಯ ಮಿರಾಶಿ, ಮಂಡಲ ಉಪಾಧ್ಯಕ್ಷ ಶಿರಿಷ್ ಪ್ರಭು ಹಾಗೂ ಪಟ್ಟಣ ಪಂಚಾಯತ ಸದಸ್ಯರು ಉಪಸ್ಥಿತರಿದ್ದರು.

More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ