April 18, 2024

Bhavana Tv

Its Your Channel

ಕಾರ್ಮಿಕ ರಾಜ್ಯ ವಿಮಾ ನಿಗಮದ, ಕರ್ನಾಟಕ ಪ್ರಾದೇಶಿಕ ಮಂಡಳಿಯ 110 ನೇ ಸಭೆ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಕಾರ್ಮಿಕ ರಾಜ್ಯ ವಿಮಾ ನಿಗಮದ, ಕರ್ನಾಟಕ ಪ್ರಾದೇಶಿಕ ಮಂಡಳಿಯ 110 ನೇ ಸಭೆಯನ್ನು ನಿಗಮದ ಪ್ರಧಾನ ಕಾರ್ಯಾಲಯದಲ್ಲಿ ಸಚಿವರಾದ ಶಿವರಾಮ ಹೆಬ್ಬಾರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಸಚಿವರಾದ ಶಿವರಾಮ ಹೆಬ್ಬಾರ, ಕೋವಿಡ್ ಸೋಂಕಿತರಿಗೆ ಸಮರ್ಪಕವಾಗಿ ಚಿಕಿತ್ಸೆ ನೀಡುವುದರ ಜೊತೆಗೆ ಕೋವಿಡ್ 3 ಅಲೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವೈದ್ಯಕೀಯ ವೆಚ್ಚದ ಮರುಪಾವತಿಯನ್ನು ತುರ್ತಾಗಿ ಮರು ಪಾವತಿಸಬೇಕು ವಿಮಾ ಚಿಕಿತ್ಸಾಲಯಗಳನ್ನು ” ವೆಲ್ ನೇಸ್ ಸೆಂಟರ್ ” ಗಳಾಗಿ ಪರಿವರ್ತಿಸಬೇಕು ಆಸ್ಪತ್ರೆಗಳ ಅಭಿವೃದ್ಧಿಗಾಗಿ ಕೇಂದ್ರ ಸರಕಾರದಿಂದ ಒಂದು ಬಾರಿಗೆ ವಿಶೇಷ ಅನುದಾನವನ್ನು ಪಡೆಯಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಜಿ.ಕಲ್ಪನಾ, ರಾಜ್ಯ ಕಾರ್ಮಿಕ ವಿಮಾ ನಿಗಮದ ಪ್ರಾದೇಶಿಕ ನಿರ್ದೇಶಕರಾದ ಸಾಹು, ನಿಗಮದ ಸದಸ್ಯರು, ಪ್ರತಿನಿಧಿಗಳು, ರಾಜ್ಯ ಕಾರ್ಮಿಕ ವಿಮಾ ನಿಗಮದ ಪ್ರಾಧಿಕಾರದ ಅಧಿಕಾರಿಗಳು, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

error: