May 19, 2024

Bhavana Tv

Its Your Channel

ಪರಿವೀಕ್ಷಣಾ ಮಂದಿರದ ಆವರಣದಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಚಿವ ಶಿವರಾಮ ಹೆಬ್ಬಾರ ಚಾಲನೆ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ ಅವರು ಪಟ್ಟಣದ ಪರಿವೀಕ್ಷಣಾ ಮಂದಿರದ ( ಐಬಿ ) ಆವರಣದಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು.
ಈ ಸಂದರ್ಭಗಳಲ್ಲಿ ವಾಯುವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ವಿ.ಎಸ್.ಪಾಟೀಲ,ಎ.ಪಿ.ಎಂ.ಸಿ. ಅಧ್ಯಕ್ಷರಾದ ಎಮ್.ಜಿ.ಭಟ್ಟ ಸಂಕದಗುAಡಿ, ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್.ಗಾಂವ್ಕರ, ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ ಬರಗದ್ದೆ , ಉಪಾಧ್ಯಕ್ಷರಾದ ಶಿರಿಷ ಪ್ರಭು, ಪ್ರಮುಖರಾದ ವಿಜಯ ಮಿರಾಶಿ, ವಿಕಾಸ ಬ್ಯಾಂಕ ಅಧ್ಯಕ್ಷರಾದ ಮುರಳಿ ಹೆಗಡೆ, ಗಣಪತಿ ಮುದ್ದೇಪಾಲ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದ ವಿನಾಯಕ ಭಟ್ಟ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

error: