May 3, 2024

Bhavana Tv

Its Your Channel

ಕಾರ್ಮಿಕ ಇಲಾಖೆಯಿಂದ ಆಜಾದಿ ಕಾ ಅಮೃತ ಮಹೋತ್ಸವ ಆಚರಣೆ ನೋಂದಣಿಗೆ ವಿಶೇಷ ಜಾಗೃತಿ ಅಭಿಯಾನ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ವಿಶೇಷ ಜಾಗೃತಿ ಮತ್ತು ನೋಂದಣಿ ಆಭಿಯಾನ ಆರಂಭಿಸಿದೆ. ನಗರದ ಕಾರ್ಮಿಕ ಭವನದ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರವರು “ಆಜಾದಿಕ ಅಮೃತ ಮಹೋತ್ಸವ್” ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾರ್ಮಿಕ ಇಲಾಖೆ ಕಲ್ಯಾಣ ಮಂಡಳಿ ವತಿಯಿಂದ ಶ್ರಮಿಕ ವರ್ಗದ ಮತ್ತು ಅವರ ಕುಟುಂಬ ವರ್ಗದವರ ಶ್ರೇಯೋಭಿವೃದ್ಧಿಗೆ ಹತ್ತು ಹಲವು ಯೋಜನೆಗಳನ್ನು ರೂಪಿಸಿ ಜಾರಿ ಮಾಡುತ್ತಿದೆ. ಈ ಸವಲತ್ತುಗಳನ್ನು ಬಳಸಿಕೊಂಡು ಕಾರ್ಮಿಕರು ದೇಶದ ಪ್ರಗತಿಯಲ್ಲಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದರು.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಪಿಂಚಣಿ, ಬಸ್‌ಪಾಸ್, ಆರೋಗ್ಯ ಸೌಲಭ್ಯ ಸೇರಿದಂತೆ ಸಹಾಯಧನ, ಶ್ರಮಿಕ್ ಸಂಜೀವಿನ, ಕಾರ್ಮಿಕ ಮಕ್ಕಳಿಗೆ ಕೆಪಿಎಸ್‌ಸಿ/ ಯುಪಿಎಸ್‌ಸಿ ತರಬೇತಿಗೆ ಅವಕಾಶ ಮಾಡಿಕೊಟ್ಟಿದೆ ಎಂದು ಸಚಿವರು ತಿಳಿಸಿದರು.
ಪ್ರಸಕ್ತ ವರ್ಷದ ಮುಂಗಡ ಪತ್ರದಲ್ಲೂ ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರವು ಶ್ರಮಿಕ ವರ್ಗದ ಸಂಕ್ಷೇಮಕ್ಕೆ ಹಲವು ಯೋಜನೆಗಳನ್ನು ನೀಡಿರುವುದಕ್ಕೆ ಮುಖ್ಯಮಂತ್ರಿಗಳಿಗೆ ತಾವು ಕೃತಜ್ಞತೆ ಅರ್ಪಿಸುತ್ತಿರುವುದಾಗಿ ಸಚಿವ ಹೆಬ್ಬಾರ ತಿಳಿಸಿದರು.
ರಾಜ್ಯದಾದ್ಯಂತ ಈ ಜಾಗೃತಿ ಅಭಿಯಾನ ಇದೇ 13ರವರೆಗೆ ನಡೆಯಲಿದ್ದು, ವ್ಯಾಪಕ ಪ್ರಚಾರ ಮತ್ತು ಅಭಿಯಾನಗಳ ಮೂಲಕ ಕಾರ್ಮಿಕರಿಗೆ ಇಲಾಖೆ ನೀಡುತ್ತಿರುವ ಸವಲತ್ತುಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು ನೋಂದಣಿಗೆ ಪ್ರೇರೆಪಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂ ಪಾಷ, ಕಾರ್ಯದರ್ಶಿ ಎಂ.ಪಿ. ಗುರುಪ್ರಸಾದ, ಜಂಟಿ ಕಾರ್ಯದರ್ಶಿ ಶಿವಪುತ್ರ ಸೇರಿದಂತೆ ಇಲಾಖೆ ಹಿರಿಯ ಅಧಿಕಾರಿಗಳು ಮತ್ತು ಶ್ರಮಿಕ ವರ್ಗದವರು ಉಪಸ್ಥಿತರಿದ್ದರೆಂದು ಕಾರ್ಮಿಕ ಇಲಾಖೆ ಪ್ರಕಟಣೆ ತಿಳಿಸಿದೆ.

error: