May 19, 2024

Bhavana Tv

Its Your Channel

ಯಲ್ಲಾಪುರ ತಾಲೂಕಿನ ಹೊಸಹಳ್ಳಿ ಗೌಳಿ ತಾಂಡಕ್ಕೆ ಕಂದಾಯ ಸಚಿವರಾದ ಅಶೋಕ ಭೇಟಿ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ: ಕಂದಾಯ ಸಚಿವರಾದ ಆರ್.ಅಶೋಕ ಹಾಗೂ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ ಅವರು ಜೊತೆಗೂಡಿ ತಾಲೂಕಿನ ಹೊಸಳ್ಳಿ ಗೌಳಿವಾಡ ಗ್ರಾಮದಲ್ಲಿ ” ಕಂದಾಯ ಸಚಿವರ ಗ್ರಾಮ ಭೇಟಿ ” ಕಾರ್ಯಕ್ರಮವನ್ನು ದೀಪಬೆಳಗಿ ಉದ್ಘಾಟಿಸಿದರು.

ವರು ಕಂದಾಯ ಸಚಿವರಾದ ಆರ್.ಅಶೋಕ ಅವರು ತಮ್ಮ ಕ್ರಿಯಾಶೀಲತೆಯಿಂದ ಕಂದಾಯ ಇಲಾಖೆಯಲ್ಲಿ ಮಹತ್ತರವಾದ ಬದಲಾವಣೆಯನ್ನು ತಂದಿದ್ದಾರೆ ನಮ್ಮ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ವಿಶೇಷವಾಗಿ ನನ್ನ ಕ್ಷೇತ್ರಕ್ಕಾಗಮಿಸಿದ್ದ ಸಂತಸ ತಂದಿದೆ. ಕ್ಷೇತ್ರದ ಜನತೆಯ ಪರವಾಗಿ ಧನ್ಯವಾದ ಅರ್ಪಿಸುವೆ ಎಂದರು.
ಈ ಕಾರ್ಯಕ್ರಮದಲ್ಲಿ ಶಾಸಕಿ ರೂಪಾಲಿ ನಾಯ್ಕ, ವಿಧಾನಪರಿಷತ ಸದಸ್ಯರಾದ ಶಾಂತಾರಾಮ್ ಸಿದ್ದಿ, ರಾಜ್ಯ ವಿಕೇಂದ್ರೀಕರಣ ಯೋಜನಾ ಸಮಿತಿ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಉಪ ಆಯುಕ್ತ ದೇವರಾಜ, ಸ್ಥಳೀಯ ಮುಖಂಡ ವಿಜಯ್ ಮಿರಾಶಿ, ಗ್ರಾಮ ಪಂಚಾಯತ ಅಧ್ಯಕ್ಷರಾದ ಮಂಜುಳ ವರದಾನಿ, ಸದಸ್ಯರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು

error: